alex Certify BIG NEWS: ಕುತೂಹಲ ಮೂಡಿಸಿದ ಜನಾರ್ಧನ ರೆಡ್ಡಿ- ಬಿಜೆಪಿ ಮುಖಂಡ ಪ್ರತಾಪ್ ಗೌಡ ಪಾಟೀಲ್ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುತೂಹಲ ಮೂಡಿಸಿದ ಜನಾರ್ಧನ ರೆಡ್ಡಿ- ಬಿಜೆಪಿ ಮುಖಂಡ ಪ್ರತಾಪ್ ಗೌಡ ಪಾಟೀಲ್ ಭೇಟಿ

ರಾಯಚೂರು: ಮಾಜಿ ಸಚಿವ ಜನಾರ್ಧನ ರೆಡ್ದಿ ಹೊಸ ಪಕ್ಷ ಘೋಷಣೆ ಮಾಡಿದ ಬೆನ್ನಲ್ಲೇ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರನ್ನು ಭೇಟಿಯಾಗಿರುವುದು ಕುತೂಹಲ ಕೆರಳಿಸಿದೆ.

ಜನಾರ್ಧನ ರೆಡ್ಡಿ ಹೊಸ ಪಕ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಜಕೀಯ ಬೆಳವಣಿಗೆಗಳು ಗರಿಗೆದರಿದ್ದು, ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮೂರು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ಪ್ರತಾಪ್ ಗೌಡ ಪಾಟೀಲ್ ಅವರನ್ನು ಜನಾರ್ಧನ ರೆಡ್ಡಿ ತಡರಾತ್ರಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಕಳೆದ ಬಾರಿ ಬಿಜೆಪಿಯಿಂದ ಮಸ್ಕಿಯಲ್ಲಿ ಸ್ಪರ್ಧಿಸಿದ್ದರೂ ಸೋಲನುಭವಿಸಿದ್ದ ಪ್ರತಾಪ್ ಗೌಡ ಪಾಟೀಲ್ ಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನ ನೀಡಿರಲಿಲ್ಲ. ಹೀಗಾಗಿ ಈಗ ಮತ್ತೆ ಪಕ್ಷಾಂತರಕ್ಕೆ ಯೋಚನೆಯಲ್ಲಿರುವ ಪ್ರತಾಪ್ ಗೌಡ ಅವರನ್ನು ಜನಾರ್ಧನ ರೆಡ್ಡಿ ಭೇಟಿ ಮಾಡಿ ಚರ್ಚಿಸಿರುವುದು ರಾಜ್ಯ ರಾಜಕೀಯದಲ್ಲಿ ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...