alex Certify BIG NEWS: ಕೃಷಿ ಕಾಯ್ದೆ ವಿರೋಧಿಸುವವರು ಮೂಲ ಉದ್ದೇಶ ಅರ್ಥೈಸಿಕೊಂಡಿದ್ದಾರಾ….? ಸಚಿವ ಕೋಟಾ ಶ್ರೀನಿವಾಸ್ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೃಷಿ ಕಾಯ್ದೆ ವಿರೋಧಿಸುವವರು ಮೂಲ ಉದ್ದೇಶ ಅರ್ಥೈಸಿಕೊಂಡಿದ್ದಾರಾ….? ಸಚಿವ ಕೋಟಾ ಶ್ರೀನಿವಾಸ್ ಪ್ರಶ್ನೆ

ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಭಾರತ್ ಬಂದ್ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ತಮ್ಮ ಅನಿಸಿಕೆಗಳನ್ನು ಹೆಳಲು ಬೀದಿಗಿಳಿದು ಹೋರಾಟ ನಡೆಸುವ ಅಗತ್ಯವಿಲ್ಲ ಎಂದಿದ್ದಾರೆ.

ಯಾದಗಿರಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಕೆಲವರು ತಮ್ಮ ಅನಿಸಿಕೆಗಳನ್ನು ಹೇಳುವುದಕ್ಕೆ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಕೃಷಿ ಕಾಯ್ದೆ ವಿರೋಧಿಸುವವರು ಅದರ ಮೂಲ ಉದ್ದೇಶವನ್ನು ಅರ್ಥೈಸಿಕೊಂಡಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಕೃಷಿ ಕಾಯ್ದೆಯನ್ನು ಜಾರಿಗೆ ತಂದೆವು. ರೈತರ ಹಿತಕ್ಕಾಗಿಯೇ ಕಾಯ್ದೆ ಜಾರಿ ತರಲಾಯಿತು. ಆದರೆ ಇವರು ಚಳುವಳಿಗಾಗಿ ಚಳುವಳಿ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...