alex Certify BIG NEWS: ಕೆಜಿಎಫ್ ಚಿತ್ರದ ತಾತ ಕೃಷ್ಣರಾವ್ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಜಿಎಫ್ ಚಿತ್ರದ ತಾತ ಕೃಷ್ಣರಾವ್ ವಿಧಿವಶ

ಮುದುಕನ ಲವ್ ಸ್ಟೋರಿ'ಗೆ ಕೆಜಿಎಫ್ ತಾತ ಕೃಷ್ಣರಾವ್ ಹೀರೋ – Public TVಬೆಂಗಳೂರು: ಕೆಜಿಎಫ್ ಸಿನಿಮಾದಲ್ಲಿ ಅಂಧನ ಪಾತ್ರದಲ್ಲಿ ಅಭಿನಯಿಸಿದ್ದ ನಟ ಕೃಷ್ಣರಾವ್ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣರಾವ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲ ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೃಷ್ಣರಾವ್ ಇದೀಗ ಕೊನೆಯುಸಿರೆಳೆದಿದ್ದಾರೆ.

ಕೆಜಿಎಫ್ ಸಿನಿಮಾದಲ್ಲಿ ಚಿಕ್ಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಕೃಷ್ಣರಾವ್, ಉತ್ತಮವಾಗಿ ನಟಿಸಿ ಪ್ರೇಕ್ಷಕರ ಮನಗೆದ್ದಿದ್ದರು. ಕೃಷ್ಣರಾವ್ ದಿ. ನಟ, ನಿರ್ದೇಶಕ ಶಂಕರ್ ನಾಗ್ ಅವರೊಂದಿಗೂ ಕೆಲಸ ಮಾಡಿದ್ದರು. ಹಲವು ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...