alex Certify BIG NEWS: ಕೆಜಿಎಫ್ ಬಾಬುಗೆ ED ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಜಿಎಫ್ ಬಾಬುಗೆ ED ಶಾಕ್

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕೋಟಿ ವೀರ ಕೆಜಿಎಫ್ ಬಾಬುಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ.

ಕೆಜಿಎಫ್ ಬಾಬುಗೆ ನಾಳೆ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ನೀಡಿದೆ.

ಕಳೆದ ಮೇ ತಿಂಗಳಲ್ಲಿ ಕೆಜಿಎಫ್ ಬಾಬು ಅವರ ವಸಂತನಗರದ ನಿವಾಸದ ಮೇಲೆ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಬಾಬು ಒಡೆತನದ 7 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಅಕ್ರಮ ಹಣ ವರ್ಗಾವಣೆ ಬಗ್ಗೆ ಕೆಲ ಸಾಕ್ಷ್ಯಗಳು ಲಭ್ಯವಾಗಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಇದೀಗ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...