alex Certify BIG NEWS: ಕೆಲಸದವನನ್ನು ಕೊಲೆಗೈದು ಮನೆ ಲೂಟಿ ಮಾಡಿದ ಕಳ್ಳರು; ಸೆಕ್ಯೂರಿಟಿ ಗಾರ್ಡ್ ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಲಸದವನನ್ನು ಕೊಲೆಗೈದು ಮನೆ ಲೂಟಿ ಮಾಡಿದ ಕಳ್ಳರು; ಸೆಕ್ಯೂರಿಟಿ ಗಾರ್ಡ್ ನಾಪತ್ತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, ಮನೆ ಕೆಲಸದವನನ್ನು ಬರ್ಬರವಾಗಿ ಹತ್ಯೆಗೈದು ಮನೆ ಲೂಟಿ ಮಾಡಿರುವ ಘಟನೆ ಕೋರಮಂಗಲದಲ್ಲಿ ನಡೆದಿದೆ.

ಕೋರಮಂಗಲದ 6ನೇ ಬ್ಲಾಕ್ ನಲ್ಲಿ ಬಿಲ್ಡರ್ ರಾಜಗೋಪಾಲ ರೆಡ್ಡಿ ಎಂಬುವವರಿಗೆ ಸೇರಿರುವ ಮನೆಯಲ್ಲಿ ಕೆಲಸಗಾರನಾಗಿದ್ದ ಕರಿಯಪ್ಪ ಎಂಬಾತನನ್ನು ಕೊಲೆಗೈದ ದುಷ್ಕರ್ಮಿಗಳು ಮನೆಯಲ್ಲಿ ಲೂಟಿ ಮಾಡಿದ್ದಾರೆ.

ರಾಜಗೋಪಾಲ ಕುಟುಂಬದವರು ಕಾರ್ಯಕ್ರಮದ ನಿಮಿತ್ತ ಹೊರಗೆ ಹೋಗಿದ್ದರು. ಇಂದು ಬೆಳಿಗ್ಗೆ ಅಡುಗೆ ಕೆಲಸದವರು ಮನೆಗೆ ಬಂದು ನೋಡಿದಾಗ ಕರಿಯಪ್ಪ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ಮನೆಯ ಸೆಕ್ಯೂರಿಟಿ ಗಾರ್ಡ್ ಆಗಿದ್ದ ಅಸ್ಸಾಂ ಮೂಲದ ಬಹದ್ದೂರ್ ನಾಪತ್ತೆಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...