alex Certify BIG NEWS: ಕೆ.ಎಸ್. ಈಶ್ವರಪ್ಪ ವಿರುದ್ಧ ಆಯನೂರು ಮಂಜುನಾಥ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆ.ಎಸ್. ಈಶ್ವರಪ್ಪ ವಿರುದ್ಧ ಆಯನೂರು ಮಂಜುನಾಥ್ ವಾಗ್ದಾಳಿ

ಶಿವಮೊಗ್ಗ: ರಾಜ್ಯದಲ್ಲಿ ಈ ಬಾರಿ ಅತಂತ್ರ ಫಲಿತಾಂಶ ಬರಲಿದೆ ಎಂದು ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಸರ್ಕಾರ ರಚನೆಯಲ್ಲಿ ಜೆಡಿಎಸ್ ಪ್ರಮುಖ ಪಾತ್ರ ನಿರ್ವಹಿಸಲಿದೆ. ಶಿವಮೊಗ್ಗದಲ್ಲಿ ಜೆಡಿಎಸ್ ಗೆದ್ದು ಇತಿಹಾಸ ನಿರ್ಮಿಸಲಿದೆ. ಶಾಂತಿ ಸೌಹಾರ್ದತೆ, ಅಭಿವೃದ್ಧಿ ಮೇಲೆ ಚುನಾವಣೆ ಮಾಡಿದ್ದೇವೆ. ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ನನಗೆ ಸಹಾಯ ಮಾಡಿದ್ದಾರೆ ಎಂದರು.

ಈ ಬಾರಿ ಹೊಸ ಇತಿಹಾಸದ ಪುಟ ತೆರೆಯುವ ವಿಶ್ವಾಸವಿದೆ. ಬಿ ಎಸ್ ವೈ ಅವರನ್ನು ಜಾತಿಗೆ ಸೀಮಿತ ಮಾಡಿ ಅಪಚಾರ ಮಾಡಿದ್ದಾರೆ. ಕೆ.ಎಸ್. ಈಶ್ವರಪ್ಪಗೆ ಯಾವುದೇ ಸಾಮರ್ಥ್ಯವಿಲ್ಲ, ಕ್ಷೇತ್ರದ ಅಭ್ಯರ್ಥಿಯನ್ನು ಗೆಲ್ಲಿಸುವ ಶಕ್ತಿಯೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...