alex Certify BIG NEWS: ಕೇಂದ್ರ ಸಚಿವ ಭಗವಂತ ಖೂಬಾರಿಂದ ಮತ್ತೊಂದು ಎಡವಟ್ಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಸಚಿವ ಭಗವಂತ ಖೂಬಾರಿಂದ ಮತ್ತೊಂದು ಎಡವಟ್ಟು

ಬಳ್ಳಾರಿ: ನಿನ್ನೆಯಷ್ಟೇ ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರಿಂದ ಸ್ವಾಗತ ಮಾಡಿಸಿಕೊಂಡಿದ್ದ ಕೇಂದ್ರ ಸಚಿವ ಭಗವಂತ ಖೂಬಾ ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಗನ್ ಮ್ಯಾನ್ ಕೈಯಲ್ಲಿ ಚಪ್ಪಲಿ ತರಿಸಿಕೊಳ್ಳುವ ಮೂಲಕ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಬಳ್ಳಾರಿಯ ಕನಕ ದುರ್ಗಮ್ಮ ದೇವಾಲಯಕ್ಕೆ ಆಗಮಿಸಿದ ಸಚಿವ ಖೂಬಾ ದೇವರ ದರ್ಶನ ಪಡೆದು ವಾಪಸ್ ತೆರಳುವಾಗ ಗನ್ ಮ್ಯಾನ್ ಕೈಯಲ್ಲಿ ಚಪ್ಪಲಿ ತರಿಸಿಕೊಂಡಿದ್ದಾರೆ.

ಬಿಜೆಪಿಯದ್ದು ತಾಲಿಬಾನ್, ಗೂಂಡಾ ಸಂಸ್ಕೃತಿ; ಜನರ ಸಂಕಷ್ಟದ ವೇಳೆ ಸಚಿವರ ಸಂಭ್ರಮಾಚರಣೆ ವಿಕೃತಿ; ಸರ್ಕಾರದ ವಿರುದ್ಧ ಈಶ್ವರ ಖಂಡ್ರೆ ವಾಗ್ದಾಳಿ

ಯಾದಗಿರಿಯಲ್ಲಿ ನಿನ್ನೆ ಬಿಜೆಪಿ ಜನಾಶಿರ್ವಾದ ರ್ಯಾಲಿ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಸಚಿವ ಖೂಬಾ ಸ್ವಾಗತ ಮಾಡಿಸಿಕೊಂಡಿದ್ದರು. ಈ ಪ್ರಕರಣ ಸಂಬಂಧ ಯಾದಗಿರಿ ಗ್ರಾಮಾಂತರ ಠಾಣೆಯ ಮೂವರು ಕಾನ್ಸ್ ಟೇಬಲ್ ವಿರುದ್ಧ ಕರ್ತವ್ಯಲೋಪ ಕೇಸ್ ದಾಖಲಿಸಿ ಸಸ್ಪೆಂಡ್ ಮಾಡಲಾಗಿತ್ತು. ಕಾರ್ಯಕ್ರಮದ ಆಯೋಜಕರ ವಿರುದ್ಧವಾಗಲಿ, ಪೊಲೀಸ್ ಅಧಿಕಾರಿಗಳ ವಿರುದ್ಧವಾಗಲಿ ಯಾವುದೇ ಕ್ರಮ ಕೈಗೊಳ್ಳದೇ ಪಿಸಿಗಳ ವಿರುದ್ಧ ಕ್ರಮ ಕೈಗೊಂಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆಯೇ ಸಚಿವ ಖೂಬಾ ಮತ್ತೊಂದು ಪ್ರಮಾದವೆಸಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...