alex Certify BIG NEWS: ಕೈಕೈ ಮಿಲಾಯಿಸಿಕೊಳ್ಳುವ ಹಂತ ತಲುಪಿದ ಸಚಿವ ಎಂಟಿಬಿ ನಾಗರಾಜ್ – ಶಾಸಕ ಶರತ್ ಬಚ್ಚೇಗೌಡ ಗಲಾಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೈಕೈ ಮಿಲಾಯಿಸಿಕೊಳ್ಳುವ ಹಂತ ತಲುಪಿದ ಸಚಿವ ಎಂಟಿಬಿ ನಾಗರಾಜ್ – ಶಾಸಕ ಶರತ್ ಬಚ್ಚೇಗೌಡ ಗಲಾಟೆ

ಬೆಂಗಳೂರು: ಸಚಿವ ಎಂಟಿಬಿ ನಾಗರಾಜ್ ಹಾಗೂ ಶಾಸಕ ಶರತ್ ಬಚ್ಚೇಗೌಡ ನಡುವೆ ಗಲಾಟೆ ನಡೆದಿದ್ದು, ಇಬ್ಬರೂ ಪರಸ್ಪರ ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ.

ಉದ್ಘಾಟನೆ ಕಾರ್ಯಕ್ರಮದ ವೇಳೆ ಸಚಿವರನ್ನೇ ಓವರ್ ಟೇಕ್ ಮಾಡಿದ ಶಾಸಕ ಶರತ್ ಬಚ್ಚೇಗೌಡ, ಸಚಿವರಿಗಿಂತ ಮೊದಲೇ ಟೇಪ್ ಕತ್ತರಿಸಿ ಕಚೇರಿ ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಸಚಿವ ಎಂಟಿಬಿ ನಾಗರಾಜ್, ಸಚಿವರಿಗೆ ಗೌರವ ಕೊಡುವಂತೆ ವಾರ್ನ್ ಮಾಡಿದ್ದಾರೆ. ಇದಕ್ಕೆ ಸಚಿವರನ್ನೇ ತಳ್ಳಿ ಶಾಸಕರು ಒಳನುಗ್ಗಿದ್ದಾರೆ. ಶಾಸಕರ ವರ್ತನೆಗೆ ಗರಂ ಆದ ಎಂಟಿಬಿ, ತಂದೆ-ಮಗನ ದಬ್ಬಾಳಿಕೆ ಹೆಚ್ಚಾಯಿತು ಎಂದು ಗುಡುಗಿದ್ದಾರೆ.

ಈ ವೇಳೆ ಕೈ ಬೆರಳು ತೋರಿಸಿ ಮಾತನಾಡದಂತೆ ಶಾಸಕ ಶರತ್, ಸಚಿವರಿಗೆ ಎಚ್ಚರಿಸಿದ್ದಾರೆ. ಇಬ್ಬರ ನಡುವೆ ಮಾತಿನ ಚಕಮಕಿ ತಾರಕಕ್ಕೇರಿದೆ. ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೂ ಗಲಾಟೆ ಹೋಗಿದೆ. ಸ್ಥಳದಲ್ಲಿದ್ದ ಮುಖಂಡರು ಇಬ್ಬರು ನಾಯಕರನ್ನು ಸಮಾಧಾನಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...