alex Certify BIG NEWS: ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಕಚೇರಿಯಲ್ಲೇ ಬಯಲು; ಸಿದ್ದರಾಮಯ್ಯ ಶಿಷ್ಯ ಪಡೆಯಿಂದ ಡಿ.ಕೆ.ಶಿಗೆ ಖೆಡ್ಡಾ; ಟಾಂಗ್ ನೀಡಿದ ಸಿ.ಟಿ.ರವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಕಚೇರಿಯಲ್ಲೇ ಬಯಲು; ಸಿದ್ದರಾಮಯ್ಯ ಶಿಷ್ಯ ಪಡೆಯಿಂದ ಡಿ.ಕೆ.ಶಿಗೆ ಖೆಡ್ಡಾ; ಟಾಂಗ್ ನೀಡಿದ ಸಿ.ಟಿ.ರವಿ

ಬೆಂಗಳೂರು: ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಯೇ ಕಾಂಗ್ರೆಸ್ ನಾಯಕರೇ ಕೆಪಿಸಿಸಿ ಅಧ್ಯಕ್ಷರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದಾರೆ. ಅಂದಮೇಲೆ ಕೆಪಿಸಿಸಿಗೆ ಎಂಥ ದುರ್ಗತಿ ಬಂದಿರಬೇಕು? ಡಿ.ಕೆ.ಶಿ ಕಲೆಕ್ಷನ್ ಗುಟ್ಟನ್ನು ಅವರದೇ ಪಕ್ಷದ ಮುಖಂಡರಾದ ಉಗ್ರಪ್ಪ, ಸಲೀಂ ಗುಸುಗುಸು ಮಾತಿನಲ್ಲೇ ಜಗಜ್ಜಾಹೀರು ಮಾಡಿದ್ದಾರೆ ಇನ್ನು ಕಾಣದ ಕಲೆಕ್ಷನ್ ಎಷ್ಟಿರಬೇಕು? ಎಂದು ಸಿ.ಟಿ.ರವಿ ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

‘ಶ್ರೀಕೃಷ್ಣ@gmail.com’ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್

ಸಿದ್ದರಾಮಯ್ಯನವರ ಶಿಷ್ಯ ಪಡೆ ಡಿ.ಕೆ.ಶಿವಕುಮಾರ್ ಅವರಿಗೆ ಖೆಡ್ಡಾ ತೋಡಲು ಸಜ್ಜಾದಂತಿದೆ. ಒಂದು ಕಡೆ ತಮ್ಮ ನಾಯಕನನ್ನು ಹೊಗಳಿ, ಇನ್ನೊಂದು ಕಡೆ ಜನತೆ ಮುಂದೆ ಡಿಕೆಶಿಯವರನ್ನು ಬೆತ್ತಲು ಮಾಡಲು ಹೊರಟಂತಿದೆ. ಯಾವುದಕ್ಕೂ ಡಿಕೆಶಿ ಎಚ್ಚೆತ್ತುಕೊಳ್ಳುವುದು ಒಳಿತು ಎಂದು ಟಾಂಗ್ ನೀಡಿದ್ದಾರೆ.

ಐಟಿ-ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸ್ ನಾಯಕರೇ ನಿಮ್ಮ ಅಧ್ಯಕ್ಷರ ಬ್ರಹ್ಮಾಂಡ ಭ್ರಷ್ಟಾಚಾರ ಬೆತ್ತಲಾಗಿದೆ. ಭ್ರಷ್ಟ ಅಧ್ಯಕ್ಷನನ್ನು ಇಟ್ಟುಕೊಂಡು ಉಪಚುನವಣೆಯಲ್ಲಿ ಯಾವ ಮುಖವಿಟ್ಟುಕೊಂಡು ಮತ ಕೇಳುತ್ತೀರಿ? ಎಂದು ಕೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...