alex Certify BIG NEWS: ಕೊರೊನಾ ಸಾಂಕ್ರಾಮಿಕದ ಎರಡು ವರ್ಷಗಳ ಬಳಿಕ ಸಹಜ ಸ್ಥಿತಿಯತ್ತ ಭಾರತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸಾಂಕ್ರಾಮಿಕದ ಎರಡು ವರ್ಷಗಳ ಬಳಿಕ ಸಹಜ ಸ್ಥಿತಿಯತ್ತ ಭಾರತ

ಕೋವಿಡ್​ 19 ಸೋಂಕನ್ನು ನಿಯಂತ್ರಣಕ್ಕೆ ತರಲು ಭಾರತವು ವಿಶ್ವದ ಅತಿದೊಡ್ಡ ಲಾಕ್​ಡೌನ್​ಗೆ ಮೊರೆ ಹೋದ ಸುಮಾರು 2 ವರ್ಷಗಳ ಬಳಿಕ ಇದೀಗ ಮಹಾರಾಷ್ಟ್ರದಲ್ಲಿ ಎಲ್ಲಾ ವಿದ್ಯಾರ್ಥಿಗಳು ಇಂದಿನಿಂದ ಶಾಲೆಗಳಿಗೆ ಮರಳಿದ್ದಾರೆ. ದೇಶದಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆಯೇ ಜನ ಜೀವನ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ.

ದೇಶದಲ್ಲಿ ದಿನನಿತ್ಯ 10 ಸಾವಿರಕ್ಕೂ ಕಡಿಮೆ ಕೋವಿಡ್​ ಪ್ರಕರಣಗಳು ವರದಿಯಾಗುತ್ತಿದೆ. ಓಮಿಕ್ರಾನ್​ ರೂಪಾಂತರಿಯಿಂದಾಗಿ ದೇಶದಲ್ಲಿ ಡಿಸೆಂಬರ್​ ತಿಂಗಳಿನ ಬಳಿಕ ದೈನಂದಿನ ಪ್ರಕರಣವು 3 ಲಕ್ಷದ ಗಡಿಯನ್ನು ದಾಟಿತ್ತು. ಆದರೆ ಇದೀಗ ಸೋಂಕು ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ.

ಕಳೆದ ವಾರ ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆ ರಾಜ್ಯ ರಾಜಧಾನಿ ಮುಂಬೈನಲ್ಲಿರುವ ಶಾಲೆಗಳು ಪುನಾರಂಭಗೊಳ್ಳಲಿವೆ. ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಫ್​ಲೈನ್​ ತರಗತಿಗಳು ಎಲ್ಲೆಡೆ ಆರಂಭಗೊಳ್ಳಲಿದೆ ಎಂದು ಹೇಳಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...