alex Certify BIG NEWS: ಕೋಮು ಸಂಘರ್ಷಕ್ಕೆ ಯತ್ನ; ಇಬ್ಬರು ಹಿಂದೂ ಕಾರ್ಯಕರ್ತರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋಮು ಸಂಘರ್ಷಕ್ಕೆ ಯತ್ನ; ಇಬ್ಬರು ಹಿಂದೂ ಕಾರ್ಯಕರ್ತರು ಅರೆಸ್ಟ್

ಕಾರವಾರ: ಕೋಮುಸಂಘರ್ಷ ಸೃಷ್ಟಿಸಿ ಶಾಂತಿ ಕದಡಲು ಯತ್ನಿಸಿದ ಆರೋಪದಲ್ಲಿ ಇಬ್ಬರು ಹಿಂದೂ ಕಾರ್ಯಕರ್ತರನ್ನು ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಹಾಗೂ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿರಾಲಿಯ ನವೀನ್ ಸೋಮಯ್ಯ ನಾಯ್ಕ್, ನವೀನ್ ವೆಂಕಟೇಶ್ ನಾಯ್ಕ್ ಬಂಧಿತರು. ಭಟ್ಕಳದಲ್ಲಿ ಕೋಮು ಸಂಘರ್ಷವನ್ನುಂಟುಮಾಡುವ ಉದ್ದೇಶಕ್ಕಾಗಿ ಇಬ್ಬರೂ ವೈಯಕ್ತಿಕ ಕಾರಣಕ್ಕೆ ಒಬ್ಬರಿಗೊಬ್ಬರು ಜಗಳ ಮಾಡಿಕೊಂಡಿದ್ದರು. ಅಲ್ಲದೇ ನವೀನ್ ಸೋಮಯ್ಯಗೆ ನವೀನ್ ವೆಂಕಟೇಶ್ ಕೀ ಚೈನ್ ನಿಂದ ಹಲ್ಲೆ ನಡೆಸಿದ್ದ. ಪೊಲೀಸ್ ಠಾಣೆಯಲ್ಲಿ ಅನ್ಯ ಕೋಮಿನಿಂದ ತಮ್ಮ ಮೇಲೆ ಹಲ್ಲೆಯಾಗಿದೆ ಎಂದು ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಇದೀಗ ಸತ್ಯಾಂಶ ಬಯಲಾಗಿದ್ದು, ಸುಳ್ಳು ದೂರು ದಾಖಲಿಸಿ ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶದಿಂದ ಇಬ್ಬರು ಇಂತಹ ಕೃತ್ಯವೆಸಗಿದ್ದಾರೆ ಎಂದು ಗೊತ್ತಾಗಿದೆ. ವಿಚಾರಣೆ ವೇಳೆಯೂ ಕೋಮು ಸಾಮರಸ್ಯ ಕದಡುವ ಉದ್ದೇಶಕ್ಕೆ ಹೀಗೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...