alex Certify BIG NEWS: ಕೋವಿಡ್ ನೆಪದಲ್ಲಿ ಚುನಾವಣೆ ಮಾಡುವ ಪ್ಲಾನ್ ಅವರದ್ದು; ಬಿಜೆಪಿ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ನೆಪದಲ್ಲಿ ಚುನಾವಣೆ ಮಾಡುವ ಪ್ಲಾನ್ ಅವರದ್ದು; ಬಿಜೆಪಿ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿ

ಬೆಳಗಾವಿ: ಬಿಜೆಪಿಗೆ ಕೋವಿಡ್ ನೆಪದಲ್ಲಿ ಚುನಾವಣೆ ಮಾಡುವ ಯೋಜನೆಯಿದೆ ಹಾಗಾಗಿ ಕೊರೊನಾ ಆತಂಕ ಹುಟ್ಟಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ವಿಪಕ್ಷಗಳು ಪ್ರತಿಭಟನೆಗೆ ಮುಂದಾದಾಗ ಕೋವಿಡ್ ನೆಪ ಹೇಳುತ್ತಾರೆ. ಕೋವಿಡ್ ಇದೆ ಎಂದು ರಾಹುಲ್ ಗಾಂಧಿಯವರಿಗೆ ಭಾರತ್ ಜೋಡೊ ಯಾತ್ರೆ ನಿಲ್ಲಿಸಲು ಹೇಳಿದ್ದಾರೆ. ಮೇಕೆದಾಟು ಪಾದಯಾತ್ರೆ ವೇಳೆಯೂ ನಮಗೆ ಅದೇ ರೀತಿ ಮಾಡಿದರು. ಈಗ ಕೋವಿಡ್ ನೆಪದಲ್ಲಿ ಎಲೆಕ್ಷನ್ ಮಾಡೋ ಪ್ಲಾನ್ ಮಾಡಿದ್ದಾರೆ ಎಂದು ಕಿಡಿಕಾರಿದರು.

ಕೋವಿಡ್ ನೆಪದಲ್ಲಿ ಎಲೆಕ್ಷನ್ ಮಾಡಿ ಅಂತ ಮಾತನಾಡಿಕೊಂಡಿದ್ದಾರೆ ಎಂಬ ಊಹಾಪೋಹದ ಸುದ್ದಿ ಕೇಳಿಬರ್ತಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...