alex Certify BIG NEWS: ಕೋವಿಡ್ ಪರಿಹಾರ ಚೆಕ್ ಬೌನ್ಸ್; ಬ್ಯಾಂಕ್ ಮ್ಯಾನೇಜರ್ ವಿರುದ್ಧ ಶಿಸ್ತುಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ಪರಿಹಾರ ಚೆಕ್ ಬೌನ್ಸ್; ಬ್ಯಾಂಕ್ ಮ್ಯಾನೇಜರ್ ವಿರುದ್ಧ ಶಿಸ್ತುಕ್ರಮ

ಬೆಂಗಳೂರು: ಕೋವಿಡ್ ಪರಿಹಾರದ ಚೆಕ್ ಬೌನ್ಸ್ ಆಗಿರುವ ಪ್ರಕರಣ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ನಡೆದಿದ್ದು, ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಾಸಕ ರಾಜುಗೌಡ ಚೆಕ್ ಬೌನ್ಸ್ ಆಗಿಲ್ಲ, ಬ್ಯಾಂಕ್ ಮ್ಯಾನೇಜರ್ ನಿಂದ ಇಬ್ಬರಿಗೆ ಸಮಸ್ಯೆಯಾಗಿದೆ ಅಷ್ಟೇ ಎಂದಿದ್ದಾರೆ.

ರಾಜ್ಯ ಸರ್ಕಾರ ನೀಡಿದ್ದ ಪರಿಹಾರದ ಚೆಕ್ ಬೌನ್ಸ್ ಆಗಿಲ್ಲ. ಖಾತೆಯಲ್ಲಿ ಹಣವಿದೆ. ಕೃಷ್ಣಾ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ನಿಂದ ಕ್ಷೇತ್ರದ ಇಬ್ಬರಿಗೆ ಸಮಸ್ಯೆಯಾಗಿದೆ. ಅನಗತ್ಯವಾಗಿ ಫಲಾನುಭವಿಗಳನ್ನು ಬ್ಯಾಂಕ್ ಗೆ ಸುತ್ತಾಡಿಸುತ್ತಿದ್ದಾರೆ. ಹೀಗಾಗಿ ಸಮಸ್ಯೆಗೆ ಕಾರಣರಾದ ಮ್ಯಾನೇಜರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಲಾಗಿದೆ.

ಶಿಸ್ತುಕ್ರಮ ಜರುಗಿಸುವ ಬಗ್ಗೆ ಸಿಎಂ ಜತೆಯೂ ಚರ್ಚೆ ನಡೆಸುತ್ತೇನೆ. ಈಗಾಗಲೇ ಡಿಸಿ ಹಾಗೂ ತಹಶೀಲ್ದಾರ್ ಜತೆ ಮಾತನಾಡಿದ್ದೇನೆ ಎಂದು ಹೇಳಿದರು.

ಕೋವಿಡ್ ನಿಂದ ಮೃತಪಟ್ಟ ಕುಟುಂಬದ ಸದಸ್ಯರಿಗೆ ಸರ್ಕಾರದಿಂದ ಪರಿಹಾರ ಚೆಕ್ ವಿತರಿಸಲಾಗಿತ್ತು. ಆದರೆ ಸುರಪುರ ತಾಲೂಕಿನ ಎರಡು ಕುಟುಂಬಗಳಿಗೆ ಪರಿಹಾರ ಚೆಕ್ ನಲ್ಲಿ ಸಮಸ್ಯೆಯಾಗಿ ಹಣ ಸಿಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...