alex Certify BIG NEWS: ಕೋವಿಡ್ ಸಂಬಂಧಿತ ವಿಪತ್ತು ನಿರ್ವಹಣಾ ಸಭೆ ರದ್ದು; ಕಾರಣವೇನು….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ಸಂಬಂಧಿತ ವಿಪತ್ತು ನಿರ್ವಹಣಾ ಸಭೆ ರದ್ದು; ಕಾರಣವೇನು….?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಹೆಚ್ಚುವ ಭೀತಿ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಇಂದು ಕರೆಯಲಾಗಿದ್ದ ತುರ್ತು ಸಭೆ ರದ್ದುಗೊಂಡಿದೆ.

ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿ ರೂಪಿಸುವ ನಿಟ್ಟಿನಲ್ಲಿ ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ನಡೆಯಬೇಕಿದ್ದ ಕೊರೊನಾ ಸಂಬಂಧಿತ ಸಭೆ ರದ್ದಾಗಿದೆ.

ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದು, ಇಂದು ವಿಧಾನಸೌಧದಲ್ಲಿ ನಡೆಯ ಬೇಕಿದ್ದ ಕೋವಿಡ್ ಸಭೆ ರದ್ದಾಗಿದೆ. ಸಭೆಯನ್ನು ಸೋಮವಾರ ನಡೆಸಲು ನಿರ್ಧರಿಸಲಾಗಿದೆ. ವಿಪತ್ತು ನಿರ್ವಹಣಾ ಬಹುತೇಕ ಅಧಿಕಾರಿಗಳು ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಿದ್ದು, ಆರೋಗ್ಯ ಸಚಿವ ಡಾ.ಸುಧಾಕರ್ ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸದಲ್ಲಿದ್ದಾರೆ ಹಾಗಾಗಿ ಇಂದಿನ ಸಭೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...