alex Certify BIG NEWS: ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ದುರ್ಮರಣದ ಬೆನ್ನಲ್ಲೇ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದ ಭವಿಷ್ಯ ವೈರಲ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ದುರ್ಮರಣದ ಬೆನ್ನಲ್ಲೇ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದ ಭವಿಷ್ಯ ವೈರಲ್…!

ಮುಂಬೈ – ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಸೂರ್ಯ ನದಿ ಚರೋತಿ ಸೇತುವೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದಾರೆ. ಅಹ್ಮದಾಬಾದ್ ನಿಂದ ಮುಂಬೈಗೆ ಬರುತ್ತಿದ್ದ ವೇಳೆ ಈ ಆಘಾತಕಾರಿ ಘಟನೆ ನಡೆದಿದೆ.

ಟಾಟಾ ಸನ್ಸ್ ಮಾಜಿ ಅಧ್ಯಕ್ಷರಾಗಿದ್ದ 54 ವರ್ಷದ ಸೈರಸ್ ಮಿಸ್ತ್ರಿ ಅವರ ಈ ಸಾವು ಉದ್ಯಮ ವಲಯಕ್ಕೆ ತೀವ್ರ ಆಘಾತ ತಂದಿದೆ. ಪ್ರಧಾನಿ ನರೇಂದ್ರ ಮೋದಿಯವರೂ ಸೇರಿದಂತೆ ಹಲವು ಗಣ್ಯರು ಸೈರಸ್ ಮಿಸ್ತ್ರಿ ಅವರ ಅಕಾಲಿಕ ಸಾವಿಗೆ ಶೋಕ ವ್ಯಕ್ತಪಡಿಸಿದ್ದಾರೆ.

ಇದರ ಮಧ್ಯೆ ದಾವಣಗೆರೆ ಜಿಲ್ಲೆ, ಹರಿಹರದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಯವರು ಕಳೆದ ಆಗಸ್ಟ್ 27ರಂದು ತಮ್ಮ ಸಾಮಾಜಿಕ ಜಾಲತಾಣ ಖಾತೆ ಅಧಿಕೃತ ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದ ಭವಿಷ್ಯ ವಾಣಿಯೊಂದು ವೈರಲ್ ಆಗಿದೆ.

ಈ ಪೋಸ್ಟ್ ನಲ್ಲಿ ಅವರು ಟಾಟಾ ಸಮೂಹದ ಮಾಜಿ ಅಧ್ಯಕ್ಷರಿಗೆ ಒಂದು ತಿಂಗಳು ಕಂಟಕ ಇದೆ. ಇದರಲ್ಲಿ ದುರ್ಮರಣ ಹೊಂದುವ ಸಾಧ್ಯತೆ ಇದೆ ಎಂದು ಹೇಳಿದ್ದು, ಅದು ಇದೀಗ ನಿಜವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...