alex Certify BIG NEWS: ಖ್ಯಾತ ನಟಿಯ ಸಹೋದರನ ಹತ್ಯೆಗೆ ಭೂಗತ ಲೋಕದ ಸಂಚು; ರಕ್ಷಣೆಗಾಗಿ ಗೃಹ ಸಚಿವರಿಗೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಖ್ಯಾತ ನಟಿಯ ಸಹೋದರನ ಹತ್ಯೆಗೆ ಭೂಗತ ಲೋಕದ ಸಂಚು; ರಕ್ಷಣೆಗಾಗಿ ಗೃಹ ಸಚಿವರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಹಲವು ವರ್ಷಗಳಿಂದ ತಣ್ಣಗಾಗಿದ್ದ ಭೂಗತ ಲೋಕದ ಸದ್ದು ಮತ್ತೆ ಕೇಳಿಬರುತ್ತಿದೆ. ಬಹುಭಾಷಾ ನಟಿಯೊಬ್ಬರ ಸಹೋದರನ ಹತ್ಯೆಗೆ ಸಂಚು ರೂಪಿಸಲಾಗಿದೆ. ಜೀವ ಬೆದರಿಕೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ದಿ.ಮುತ್ತಪ್ಪ ರೈ ಆಪ್ತರ ಬಳಗದಲ್ಲಿ ಗುರುತಿಸಿಕೊಂಡಿದ್ದ ಮನ್ಮಿತ್ ರೈ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ ತನ್ನ ವಿರುದ್ಧದ ಆರೋಪ ನಿರಾಕರಿಸಿರುವ ಮನ್ಮಿತ್ ರೈ, ತಾನು ವಿದೇಶದಲ್ಲಿರುವುದಾಗಿ ತಿಳಿಸಿದ್ದಾರೆ.

ಮೋದಿ ಸರ್ಕಾರದಿಂದ ಭಾರತದ ‘ಪ್ರತಿಷ್ಠೆ’ ವಿಶ್ವಮಟ್ಟದಲ್ಲಿ ಪುನರ್ ಸ್ಥಾಪನೆ: ಅಮಿತ್ ಶಾ ಹೇಳಿಕೆ

ಇನ್ನೊಂದೆಡೆ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಗುಣರಂಜನ್ ಶೆಟ್ಟಿಗೆ ಮನ್ಮಿತ್ ರೈನಿಂದ ಜೀವ ಬೆದರಿಕೆಯಿದೆ. ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ. ಒಂದು ಕಾಲದಲ್ಲಿ ಗುಣರಂಜನ್ ಶೆಟ್ಟಿ ಹಾಗೂ ಮನ್ಮಿತ್ ರೈ ಇಬ್ಬರೂ ಮುತ್ತಪ್ಪ ರೈ ಆಪ್ತವಲಯದಲ್ಲಿಯೇ ಗುರುತಿಸಿಕೊಂಡಿದ್ದರು. ಇದೀಗ ಇಬ್ಬರ ನಡುವೆ ಗಲಾಟೆಯಾಗಿದೆ ಎನ್ನಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...