alex Certify BIG NEWS: ಗಡಿ ವಿವಾದ; ಸಿದ್ದರಾಮಯ್ಯ ವಿರುದ್ಧ ಸಚಿವ ಕಾರಜೋಳ ಏಕವಚನದಲ್ಲಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗಡಿ ವಿವಾದ; ಸಿದ್ದರಾಮಯ್ಯ ವಿರುದ್ಧ ಸಚಿವ ಕಾರಜೋಳ ಏಕವಚನದಲ್ಲಿ ವಾಗ್ದಾಳಿ

ಬಾಗಲಕೋಟೆ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ವೀಕ್ ಮುಖ್ಯಮಂತ್ರಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ, ಅವನೇ 5 ವರ್ಷ ಸಿಎಂ ಇದ್ದನಲ್ಲ ಆಗ ಯಾಕೆ ಗಡಿ ಸಮಸ್ಯೆ ಬಗೆಹರಿಸಲಿಲ್ಲ ? ಸುಮ್ಮನೇ ಬಾಯಿ ಚಪಲಕ್ಕೆ ಏನೇನೋ ಮಾತನಾಡುವುದಲ್ಲ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

60 ವರ್ಷ ಆಡಳಿತದಲ್ಲಿದ್ದ ಕಾಂಗ್ರೆಸ್ ಸಮಸ್ಯೆ ಸರಿಪಡಿಸಬಹುದಿತ್ತು ಆದರೂ ಸಮಸ್ಯೆ ಬಗೆಹರಿಸಲಿಲ್ಲ. ಅಂದಿನ ಕಾಂಗ್ರೆಸ್ ತ್ರಿಬಲ್ ಇಂಜಿನ್ ಸರ್ಕಾರ ಯಾಕೆ ಮಾಡಲಿಲ್ಲ. ಗಡಿ ಸಮಸ್ಯೆ ಬಗೆಹರಿಸಬೇಡಿ ಎಂದು ಯಾರಾದರೂ ಆಣೆ ಹಾಕಿದ್ದರಾ? ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...