alex Certify BIG NEWS: ಗಲಾಟೆ ಬಗ್ಗೆ ಮಾಹಿತಿ ಇಲ್ಲ; ಯಾರೇ ತಪ್ಪು ಮಾಡಿದರೂ ತಪ್ಪೇ ಎಂದ ಸಚಿವ ಸೋಮಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗಲಾಟೆ ಬಗ್ಗೆ ಮಾಹಿತಿ ಇಲ್ಲ; ಯಾರೇ ತಪ್ಪು ಮಾಡಿದರೂ ತಪ್ಪೇ ಎಂದ ಸಚಿವ ಸೋಮಣ್ಣ

ಬೆಂಗಳೂರು: ನಟ ಸೃಜನ್ ಲೋಕೇಶ್ ಹಾಗೂ ತಮ್ಮ ಮಗ ಅರುಣ್ ಟೀಮ್ ನಡುವೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ವಸತಿ ಸಚಿವ ವಿ. ಸೋಮಣ್ಣ, ಗಲಾಟೆ ಬಗ್ಗೆ ನನಗೆ ಮಾಹಿತಿ ಇಲ್ಲ, ಅನಗತ್ಯವಾಗಿ ಏನೇನೋ ಸುದ್ದಿ ಹಬ್ಬಿಸುವುದು ಬೇಡ ಎಂದು ಹೇಳಿದ್ದಾರೆ.

ಚಾಮರಾಜ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಣ್ಣ, ನಾನೊಬ್ಬ ರಾಜಕಾರಣಿ. ನನ್ನ ಮಗ ಅರುಣ್ ನನ್ನ ಜೊತೆಯಲ್ಲಿಲ್ಲ. 10-12 ವರ್ಷಗಳಿಂದ ಬೇರೆ ಮನೆಯಲ್ಲಿ ವಾಸವಾಗಿದ್ದಾನೆ. ಗಲಾಟೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.

ಗಲಾಟೆಯಾಗಿ ಏನಾದರೂ ಸಮಸ್ಯೆಯಾಗಿದ್ದರೆ ತಪ್ಪು ಯಾರೇ ಮಾಡಿದರೂ ತಪ್ಪೆ. ಆದರೆ ಸುಮ್ಮನೇ ಏನೇನೋ ಮಾತನಾಡುವುದರಲ್ಲಿ ಅರ್ಥವಿಲ್ಲ. ಈ ಬಗ್ಗೆ ಮಾಹಿತಿ ಪಡೆದುಕೊಂಡು ಬಳಿಕ ಉತ್ತರಿಸುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...