alex Certify BIG NEWS: ಗಾಯಾಳು ಶಾರಿಕ್ ಗುರುತು ಪತ್ತೆ ಹಚ್ಚಿದ ಕುಟುಂಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗಾಯಾಳು ಶಾರಿಕ್ ಗುರುತು ಪತ್ತೆ ಹಚ್ಚಿದ ಕುಟುಂಬ

ಮಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಗಾಯಾಳು ಶಾರಿಕ್ ಸ್ಥಿತಿ ಗಂಭಿರವಾಗಿದ್ದು, ಆತನ ಗುರುತು ಪತ್ತೆಗಾಗಿ ಪೊಲೀಸರು ಕುಟುಂಬದವರನ್ನು ಕರೆ ತಂದಿದ್ದಾರೆ.

ಮಂಗಳೂರಿನ ಕಂಕನವಾಡಿ ಆಸ್ಪತ್ರೆಯಲ್ಲಿ ಶಂಕಿತ ಶಾರಿಕ್ ಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಶಾರಿಕ್ ಗೆ ಚಿಕಿತ್ಸೆ ಮುಂದುವರೆದಿದೆ. ಶಾರಿಕ್ ಮುಖ ಹಾಗೂ ಮೈಮೇಲೆ ಸುಟ್ಟ ಗಾಯಗಳಾಗಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಶಂಕಿತ ಶಿವಮೊಗ್ಗ ತುಂಗಾನದಿ ದಡದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯೂ ಆಗಿರುವ ಶಾರಿಕ್ ಹೌದೇ ಎಂಬುದನ್ನು ಪತ್ತೆ ಮಾಡಲು ಆತನ ಚಿಕ್ಕಮ್ಮ ಹಾಗೂ ಸಹೋದರಿಯನ್ನು ಪೊಲೀಸರು ಆಸ್ಪತ್ರೆಗೆ ಕರೆ ತಂದಿದ್ದಾರೆ. ಗಾಯಾಳು ಶಾರಿಕ್ ಎಂಬುದನ್ನು ಕುಟುಂಬದವರು ಗುರುತಿಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...