alex Certify BIG NEWS: ಗೂಂಡಾ ಡಿ.ಕೆ.ಶಿವಕುಮಾರ್, ಜಾತಿವಾದಿ ಸಿದ್ದರಾಮಯ್ಯ; ಸಚಿವ ಈಶ್ವರಪ್ಪ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೂಂಡಾ ಡಿ.ಕೆ.ಶಿವಕುಮಾರ್, ಜಾತಿವಾದಿ ಸಿದ್ದರಾಮಯ್ಯ; ಸಚಿವ ಈಶ್ವರಪ್ಪ ವಾಗ್ದಾಳಿ

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷದಿಂದ ಆರಂಭವಾದ ವಿವಾದ ಇದೀಗ ರಾಜಕೀಯ ನಾಯಕರ ವಾಕ್ಸಮರಕ್ಕೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಜಾತಿವಾದಿ ಸಿದ್ದರಾಮಯ್ಯ, ಗೂಂಡಾ ಡಿ.ಕೆ.ಶಿವಕುಮಾರ್ ಎಂದು ಕಿಡಿಕಾರಿದ್ದಾರೆ.

ಇಲ್ಲಿದೆ ನೋಡಿ ಈವರೆಗೆ ಒಂದೇ ಒಂದು ಕೊರೊನಾ ಪ್ರಕರಣ ದಾಖಲಿಸದ ದೇಶಗಳ ಪಟ್ಟಿ

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ನಮ್ಮನ್ನು ಬಿಟ್ಟು ಇನ್ಯಾರೂ ಮುನ್ನುಗ್ಗೋಕೆ ಸಾಧ್ಯವಿಲ್ಲ, ಮುಂಬರುವ ಚುನಾವಣೆಯಲ್ಲಿಯೂ ನಾವೇ ಗೆದ್ದು ವಿಧಾನಸೌಧಕ್ಕೆ ಹೋಗುತ್ತೇವೆ. ಬಿಜೆಪಿ ಗೆಲುವು ನಿಶ್ಚಿತ ಎಂದರು.

ವಿಧಾನಸಭೆಗೆ ಗೂಂಡಾ ಡಿ.ಕೆ.ಶಿವಕುಮಾರ್ ಬರ್ತಾರಾ? ಇಲ್ಲ ಜಾತಿವಾದಿ ಸಿದ್ದರಾಮಯ್ಯ ಬರ್ತಾರಾ? ಡಿಕೆಶಿ ಹಾಗೂ ಸಿದ್ದರಾಮಯ್ಯ ಬಡಿದಾಡಿಕೊಳ್ಳುತ್ತಿದ್ದಾರೆ. ಆ ಗೂಂಡಾ ಹಾಗೂ ಜಾತಿವಾದಿಗಳನ್ನು ಪಕ್ಕಕ್ಕೆ ಸರಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಭದ್ರಾವತಿಯಲ್ಲಿಯೂ ಬಿಜೆಪಿ ಅಭ್ಯರ್ಥಿಯನ್ನೇ ಗೆಲ್ಲಿಸಬೇಕು. ಮುಂದಿನ ಬಾರಿಯೂ ರಾಜ್ಯದಲ್ಲಿ ಬಿಜೆಪಿಯೇ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...