alex Certify BIG NEWS: ಗೃಹ ಸಚಿವರೇ, ನಿಮ್ಮ ಮನೆ ಸುತ್ತಮುತ್ತಲೇ ಉಗ್ರರು ಅಡಗಿದ್ದಾರೆ; ಪ್ರಮೋದ್ ಮುತಾಲಿಕ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೃಹ ಸಚಿವರೇ, ನಿಮ್ಮ ಮನೆ ಸುತ್ತಮುತ್ತಲೇ ಉಗ್ರರು ಅಡಗಿದ್ದಾರೆ; ಪ್ರಮೋದ್ ಮುತಾಲಿಕ್ ವಾಗ್ದಾಳಿ

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಸ್ವಕ್ಷೇತ್ರ ತೀರ್ಥಹಳ್ಳಿ ಭಾಗವೇ ಉಗ್ರರ ಅಡಗುತಾಣವಾಗಿದೆ. ಈ ಹಿಂದೆ ನಡೆದ ಉಗ್ರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಬಂಧಿತರಾದವರು ತೀರ್ಥಹಳ್ಳಿ ಮೂಲದವರೇ ಆಗಿದ್ದಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಪಿ ಎಫ್ ಐ ಸಂಘಟನೆ ಬ್ಯಾನ್ ಮಾಡಿದ್ದರೂ ಅವರ ಮಾನಸಿಕತೆ ಬ್ಯಾನ್ ಆಗಿಲ್ಲ. ಕರಾವಳಿ ಭಾಗದಲ್ಲಿ ಉಗ್ರರ ಕೃತ್ಯ ಹೆಚ್ಚಾಗುತ್ತಿದೆ. ಈ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದ್ದಾರೆ.

ಗೃಹ ಸಚಿವರೇ, ನಿಮ್ಮ ಕ್ಷೇತ್ರ ನಿಮ್ಮ ಮನೆಯ ಸುತಮುತ್ತಲೇ ಉಗ್ರರು ಅಡಗಿಕೊಂಡಿದ್ದಾರೆ. ನಿಮ್ಮ ಮನೆಯಂಗಳದಲ್ಲೇ ಉಗ್ರರ ಅಡಗುತಾಣವಿದೆ. ಈ ಹಿಂದಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿತರಾದ ಉಗ್ರರ ಮೂಲ ಕೂಡ ತೀರ್ಥಹಳ್ಳಿ. ಇದನ್ನು ಇಷ್ಟು ಹಗುರವಾಗಿ ಪರಿಗಣಿಸಬೇಡಿ. ತೀರ್ಥಹಳ್ಳಿ ಉಗ್ರರ ಸೆಂಟರ್ ಆಗಿದೆ. ಕಠಿಣ ಕ್ರಮವನ್ನು ಕೈಗೊಳ್ಳಲೇಬೇಕು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...