alex Certify BIG NEWS: ಗೋಲಿಬಾರ್ ಆದರೂ ಬಿಡಲ್ಲ; ಬೇಡಿಕೆ ಈಡೇರದಿದ್ದರೆ ನಾಳೆ ಸಿಎಂ ಮನೆ ಮುತ್ತಿಗೆ ಹಾಕುತ್ತೇವೆ; ಅಂಗನವಾಡಿ ಕಾರ್ಯಕರ್ತೆಯರ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೋಲಿಬಾರ್ ಆದರೂ ಬಿಡಲ್ಲ; ಬೇಡಿಕೆ ಈಡೇರದಿದ್ದರೆ ನಾಳೆ ಸಿಎಂ ಮನೆ ಮುತ್ತಿಗೆ ಹಾಕುತ್ತೇವೆ; ಅಂಗನವಾಡಿ ಕಾರ್ಯಕರ್ತೆಯರ ಎಚ್ಚರಿಕೆ

ಬೆಂಗಳೂರು: ಕಳೆದ 9 ದಿನಗಳಿಂದ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಿದ್ದು, ಪ್ರತಿಭಟನಾ ನಿರತ ಕಾರ್ಯಕರ್ತೆಯರ ಸಹನೆಯ ಕಟ್ಟೆಯೊಡೆದಿದೆ.

ಇಂದು ಸಂಜೆಯೊಳಗಾಗಿ ರಾಜ್ಯ ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೆ ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಗೋಲಿಬಾರ್, ಲಾಠಿಚಾರ್ಜ್ ಮಾಡಿದರೂ ಸರಿ ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯಲ್ಲ, ಎಂದೋ ಸಾಯಲೇಬೇಕು ನಾಳೆಯೇ ಸಾಯುತ್ತೇವೆ. 15 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಸಿಎಂ ಮನೆ ಮುತ್ತಿಗೆ ಹಾಕುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಸಂಜೆಯೊಳಗೆ ಸಿಎಂ ಸಭೆ ನಡೆಸಿ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಗಡುವು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...