alex Certify BIG NEWS: ಗ್ಯಾಂಗ್ ರೇಪ್ ಪ್ರಕರಣ; ಕಾರಾಗೃಹದಲ್ಲೆ ಆರೋಪಿಗಳನ್ನು ಗುರುತಿಸಿದ ಸಂತ್ರಸ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ಯಾಂಗ್ ರೇಪ್ ಪ್ರಕರಣ; ಕಾರಾಗೃಹದಲ್ಲೆ ಆರೋಪಿಗಳನ್ನು ಗುರುತಿಸಿದ ಸಂತ್ರಸ್ತೆ

ಮೈಸೂರು; ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಜೈಲಿನಲ್ಲಿದ್ದ ಆರು ಆರೋಪಿಗಳ ಗುರುತು ಪತ್ತೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಆಗಸ್ಟ್ 24ರಂದು ಮೈಸೂರಿನ ಲಲಿತಾದ್ರಿ ಗುಡ್ಡ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೈಸೂರು ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಇಂದು ಆರೋಪಿಗಳ ಗುರುತು ಪತ್ತೆಗಾಗಿ ಜೈಲಿಗೆ ಅಧಿಕಾರಿಗಳೊಂದಿಗೆ ಆಗಮಿಸಿದ ಸಂತ್ರಸ್ತೆ, 6 ಆರೋಪಿಗಳನ್ನು ಗುರುತಿಸಿದ್ದಾರೆ.

ಪ್ರಕರಣದಲ್ಲಿ ಸೆಕ್ಷನ್ 164ರ ಅಡಿ ಸಂತ್ರಸ್ತೆಯ ಹೇಳಿಕೆ ಮಹತ್ವದ್ದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ನಿನ್ನೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗಿದ್ದ ಯುವತಿ ತನಿಖಾಧಿಕಾರಿ ಸಮ್ಮುಖದಲ್ಲಿ ತನ್ನ ಹೇಳಿಕೆ ದಾಖಲಿಸಿದ್ದರು. ಮುಚ್ಚಿದ ಲಕೋಟೆಯಲ್ಲಿ ಯುವತಿ ಹೇಳಿಕೆ ಭದ್ರಪಡಿಸಲಾಗಿದೆ. ಇಂದು ಜೈಲಿನಲ್ಲಿದ್ದ ಆರೋಪಿಗಳ ಗುರುತನ್ನು ಪತ್ತೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Co se stane, Harvard označil dvě potraviny Kdy solit těstoviny: nejčastější chyby, které dělá Nejen skořice a šalvěj - 11 zdravých Nikdy nedělejte pilulky: Zde je důvod, proč Lékař odhaluje neobvyklé vlastnosti vejcí: Co jste o nich