alex Certify BIG NEWS: ಗ್ರಾಮಸ್ಥರು ಕಳ್ಳ, ಹುಚ್ಚು ನಾಯಿ ತರ ನನ್ನ ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ; ಇದೊಂದು ರಾಜಕೀಯ ದಾಳಿ; ಶಾಸಕ ಎಂ.ಪಿ.ಕುಮಾರಸ್ವಾಮಿ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ರಾಮಸ್ಥರು ಕಳ್ಳ, ಹುಚ್ಚು ನಾಯಿ ತರ ನನ್ನ ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ; ಇದೊಂದು ರಾಜಕೀಯ ದಾಳಿ; ಶಾಸಕ ಎಂ.ಪಿ.ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಚುನಾವಣೆಗೆ ನಿಲ್ಲಬಾರದು ಎಂದು ನನ್ನ ವಿರುದ್ಧ ಸಂಚು ಮಾಡಲಾಗಿದೆ. ನಾನು ಒಂದೇ ಒಂದು ಮಾತನಾಡಿಲ್ಲ ಆದರೂ ನನ್ನ ವಿರುದ್ಧ ಸಂಚು ಮಾಡಿ ಹಲ್ಲೆ ನಡೆಸಲಾಗಿದೆ ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಗ್ರಾಮಸ್ಥರಿಂದ ತಮ್ಮ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆಯಲ್ಲಿ ಮಾತನಾಡಿದ ಶಾಸಕರು, ಎಲ್ಲಾ ಶಾಸಕರಿಗೂ ರಾಜ್ಯ ಸರ್ಕಾರ ಭದ್ರತೆ ನೀಡಬೇಕು. ನನ್ನ ಮೇಲೆ ನಡೆದಿರುವುದು ರಾಜಕೀಯ ಷಡ್ಯಂತ್ರದ ದಾಳಿ. ನನಗೆ ಗ್ರಾಮಸ್ಥರು ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಕಳ್ಳ, ಹುಚ್ಚು ನಾಯಿ ರೀತಿ ನನ್ನನ್ನು ಅಟ್ಟಾಡಿಸಿದರು. ಬಳಿಕ ನಾನೇ ಓಡಿ ಬಂದು ಕಾರಿನಲ್ಲಿ ಕುಳಿತುಕೊಂಡೆ. ಕಾರಿನ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದು ಆನೆ ಪ್ರಕರಣವಲ್ಲ. ರಾಜಕೀಯವಾಗಿ ದಾಳಿ. ಬಟ್ಟೆ ನೂರು ತರ್ತೀನಿ, ಕಣ್ಣು, ಕೈ-ಕಾಲು ಹೋಗಿದ್ರೆ? ನನಗೆ ಮಾತ್ರವಲ್ಲ, ಪೊಲೀಸರಿಗೂ ಹೊಡೆದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...