alex Certify BIG NEWS: ಘಟಪ್ರಭಾ ನದಿಯಲ್ಲಿ ಶವವಾಗಿ ಪತ್ತೆಯಾದ ಪತ್ರಕರ್ತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಘಟಪ್ರಭಾ ನದಿಯಲ್ಲಿ ಶವವಾಗಿ ಪತ್ತೆಯಾದ ಪತ್ರಕರ್ತ

ಬಾಗಲಕೋಟೆ: ಪ್ರತಿಷ್ಠಿತ ಪತ್ರಿಕೆಯ ಪತ್ರಕರ್ತರೊಬ್ಬರ ಶವ ಘಟಪ್ರಭಾ ನದಿಯಲ್ಲಿ ಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿಯಲ್ಲಿ ನಡೆದಿದೆ.

43 ವರ್ಷದ ಪ್ರಭು ಲಕ್ಷಟ್ಟಿ ಮೃತ ಪತ್ರಕರ್ತ. ಪ್ರಭು ಲಕ್ಷಟ್ಟಿ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಪ್ರಜಾವಾಣಿ ಸ್ಟ್ರಿಂಜರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಎರಡು ದಿನಗಳಿಂದ ನಾಪತ್ತೆಯಾಗಿದ್ದ ಪ್ರಭು ಅವರ ಬೈಕ್ ಹಾಗೂ ಚಪ್ಪಲಿ ಘಟಪ್ರಭಾ ನದಿಯ ಸೇತುವೆ ಮೇಲೆ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲಿಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಿಂದ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.

ಇದೀಗ ಅವರ ಶವ ನದಿಯಲ್ಲಿ ಪತ್ತೆಯಾಗಿದ್ದು, ಪ್ರಭು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...