alex Certify BIG NEWS: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ತನಿಖೆಗೆ 5 ವಿಶೇಷ ತಂಡ ರಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ತನಿಖೆಗೆ 5 ವಿಶೇಷ ತಂಡ ರಚನೆ

ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಹುಬ್ಬಳ್ಳಿ ಪೊಲೀಸರು ಬಲೆ ಬೀಸಿದ್ದಾರೆ.

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷ್ನರ್ ಲಾಬೂರಾಮ್, ಹುಬ್ಬಳ್ಳಿಯ ಪ್ರೆಸಿಡೆಂಟ್ ಹೋಟೆಲ್ ಗೆ 2ನೇ ತಾರಿಖಿನಂದೇ ಗುರೂಜಿ ಬಂದಿದ್ದರು. ನಾಳೆ ಹೋಟೆಲ್ ರೂಮ್ ಖಾಲಿ ಮಾಡಿ ತೆರಳುವವರಿದ್ದರು. ಹೋಟೆಲ್ ರೂಮ್ ನಲ್ಲಿದ್ದ ಗುರೂಜಿಯವರನ್ನು ಆಶೀರ್ವಾದ ಪಡೆಯಲೆಂದು ಹೇಳಿ ಪೋನ್ ಮಾಡಿ ಗುರೂಜಿಯವರನ್ನು ಕೆಳಗೆ ಕರೆದು ಆರೋಪಿಗಳು ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಹತ್ಯೆಯ ಕೃತ್ಯದಲ್ಲಿ ಇಬ್ಬರು ಆರೋಪಿಗಳು ನೇರವಾಗಿ ಭಾಗಿಯಾಗಿದ್ದಾರೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಶೋಧ ಕಾರ್ಯ ಚುರುಕುಗೊಂಡಿದೆ. ಪ್ರಕರಣದ ತನಿಖೆಗೆ 5 ವಿಷೇಷ ತಂಡ ರಚನೆ ಮಾಡಲಾಗಿದೆ. ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...