alex Certify BIG NEWS: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಹಂತಕರನ್ನು ಹಿಡಿದ ಪೊಲೀಸರಿಗೆ ಪ್ರಶಸ್ತಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಹಂತಕರನ್ನು ಹಿಡಿದ ಪೊಲೀಸರಿಗೆ ಪ್ರಶಸ್ತಿ ಘೋಷಣೆ

ತುಮಕೂರು: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ನಾಲ್ಕೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಮಿಂಚಿನ ಕಾರ್ಯಾಚರಣೆ ಶ್ಲಾಘಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಹಂತಕರನ್ನು ಹಿಡಿದ ಪೊಲೀಸರಿಗೆ ಪ್ರಶಸ್ತಿ ನೀಡುವುದಾಗಿ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಚಂದ್ರಶೇಖರ್ ಗುರೂಜಿ ಹತ್ಯೆಯಾದ ಕೆಲವೇ ಘಂಟೆಗಳಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಎಸ್ಕೇಪ್ ಆಗುತ್ತಿದ್ದ ಇಬ್ಬರು ಹಂತಕರನ್ನು ರಾಮದುರ್ಗ ಬಳಿ ಜೆಸಿಬಿ ಅಡ್ಡ ಹಾಕಿ ಬಂಧಿಸಲಾಗಿದೆ. ಹುಬ್ಬಳ್ಳಿ ಹಾಗೂ ರಾಮದುರ್ಗ ಪೊಲೀಸರ ಕಾರ್ಯಚರಣೆ ಮೆಚ್ಚುವಂತದ್ದು ಎಂದರು.

ಸ್ವಲ್ಪ ತಡವಾಗಿದ್ರೂ ಆರೋಪಿಗಳು ಗಡಿ ದಾಟಿ ಮಹಾರಾಷ್ಟ್ರಕ್ಕೆ ಎಸ್ಕೇಪ್ ಆಗುತ್ತಿದ್ದರು. ಪೊಲೀಸರ ಕಾರ್ಯವೈಖರಿಗೆ ಹೃದಯತುಂಬಿ ಬಂದಿದೆ. ನಾಳೆ ಪೊಲೀಸರನ್ನು ಭೇಟಿಯಾಗಿ ಅವಾರ್ಡ್ ಘೋಷಿಸುತ್ತೇನೆ. ಸರ್ಟಿಫಿಕೇಟ್ ನೀಡಲಾಗುವುದು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...