alex Certify BIG NEWS: ಚುನಾವಣಾ ಫಲಿತಾಂಶ ಪಂಜಾಬ್ ನಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದೆ; ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚುನಾವಣಾ ಫಲಿತಾಂಶ ಪಂಜಾಬ್ ನಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದೆ; ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಚಂಡೀಘಡ್: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದೆ. ಹೊಸ ಕ್ರಾಂತಿಗೆ ನಾಂದಿ ಹಾಡಿದೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.

ಆಪ್ ಕಚೇರಿಯಲ್ಲಿ ವಿಜಯೋತ್ಸವ ಭಾಷಣ ಮಾಡಿದ ಅರವಿಂದ್ ಕೇಜ್ರಿವಾಲ್, ಪಂಜಾಬ್ ಫಲಿತಾಂಶದಿಂದ ನಾನು ಆತಂಕವಾದಿಯಲ್ಲ, ನಿಜವಾದ ದೇಶಭಕ್ತ ಎಂಬುದನ್ನು ಜನರೇ ಉತ್ತರ ನೀಡಿದ್ದಾರೆ. ಈ ಗೆಲುವು ಕೇವಲ ಆಪ್ ಪಕ್ಷದ ಗೆಲುವಲ್ಲ, ಇಡೀ ಪಂಜಾಬ್ ಜನತೆಯ ಗೆಲುವು. ಭಗತ್ ಸಿಂಗ್ ಕಂಡ ಕನಸು ಇಂದು ನನಸಾಗಿದೆ ಎಂದು ಹೇಳಿದ್ದಾರೆ.

ಟಿವಿಎಸ್ ಸಾಧನೆಗೆ ಮತ್ತೊಂದು ಗರಿ; ‌ʼಇಂಡಿಯನ್ ಮೋಟಾರ್ ಸೈಕಲ್ ಆಫ್ ದಿ ಇಯರ್ʼ ಪ್ರಶಸ್ತಿ ಪಡೆದ ರೈಡರ್ 125

ಆಪ್ ವಿರುದ್ಧ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಹಲವು ರೀತಿಯ ಷಡ್ಯಂತ್ರ ನಡೆಸಿದರು. ನನ್ನನ್ನು ಭಯೋತ್ಪಾದಕ ಎಂದು ಕರೆದರು. ಆದರೆ ಎಲ್ಲದಕ್ಕೂ ಜನರೇ ತಕ್ಕ ಉತ್ತರ ನೀಡಿದ್ದಾರೆ. ಪಂಜಾಬ್ ನಲ್ಲಿ ಜನರು ಬದಲಾವಣೆ ಬಯಸಿದ್ದಾರೆ. ರಾಷ್ಟ್ರೀಯ ಪಕ್ಷಗಳ ಭ್ರಷ್ಟಾಚಾರ, ದುರಾಡಳಿತಕ್ಕೆ ಜನರು ಬೇಸತ್ತಿದ್ದಾರೆ. ಆಪ್ ಗೆಲುವಿಗೆ ಕಾರಣರಾದ ಮತದಾರರಿಗೆ ಧನ್ಯವಾದಗಳು ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...