alex Certify BIG NEWS: ಚುನಾವಣೆ ಬಂದಾಗ ಮಾತ್ರ ಇದೆಲ್ಲ ನೆನಪಾಗುತ್ತೆ; ಕುಮಾರಸ್ವಾಮಿಗೆ ಯು.ಟಿ. ಖಾದರ್ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚುನಾವಣೆ ಬಂದಾಗ ಮಾತ್ರ ಇದೆಲ್ಲ ನೆನಪಾಗುತ್ತೆ; ಕುಮಾರಸ್ವಾಮಿಗೆ ಯು.ಟಿ. ಖಾದರ್ ತಿರುಗೇಟು

ಹಾನಗಲ್; ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವೆಸಗಲಾಗುತ್ತಿದೆ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಸಚಿವ ಯು.ಟಿ. ಖಾದರ್, ಚುನಾವಣೆ ಸಮೀಪಿಸುತ್ತಿದ್ದಂತೆ ಕುಮಾರಸ್ವಾಮಿಗೆ ಇವೆಲ್ಲ ನೆನಪಾಗುತ್ತೆ, ಮೊದಲು ಅವರ ಪಕ್ಷವನ್ನು ನೋಡಿಕೊಳ್ಳಲಿ ಎಂದಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಯು.ಟಿ. ಖಾದರ್, ಜೆಡಿಎಸ್ ಮೂಲಕ ಬಿಜೆಪಿ, ಆರ್.ಎಸ್.ಎಸ್. ಅಜೆಂಡಾ ಅನುಷ್ಠಾನ ಮಾಡಲಾಗುತ್ತಿದೆ. ಉಪಚುನಾವಣೆಯಲ್ಲಿ ಜನರೇ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಸ್ಕೂಬಾ ಡೈವರ್‌ ನನ್ನು ಅಪ್ಪಿದ ನೀರು ನಾಯಿ…! ಅಪರೂಪದ ವಿಡಿಯೋ ವೈರಲ್‌

ಕುಮಾರಸ್ವಾಮಿ ಚುನಾವಣೆ ಬಂದಾಗ ಮಾತ್ರ ಇಂತಹ ಹೇಳಿಕೆ ನೀಡುತ್ತಿರುವುದರ ಹಿಂದಿನ ಉದ್ದೇಶವೇನು ? ನಮ್ಮ ಪಕ್ಷದ ಬಗ್ಗೆ ಆರೋಪ ಮಾಡುವ ಬದಲು ಅವರ ಪಕ್ಷದ ಬಗ್ಗೆ ಮೊದಲು ನೋಡಿಕೊಳ್ಳಲಿ. ನಮ್ಮ ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದ್ದರೆ, ಸಮಸ್ಯೆಯಾಗಿದ್ದರೆ ಅದನ್ನು ಬಗೆಹರಿಸಲು ನಮ್ಮ ಪಕ್ಷದ ರಾಜ್ಯ ನಾಯಕರು, ಶಾಸಕರು, ಕಾರ್ಯಕರ್ತರಿದ್ದಾರೆ. ನಮ್ಮ ಬಗ್ಗೆ ಮಾತನಾಡುವ ಮೊದಲು ಕುಮಾರಸ್ವಾಮಿ ಜೆಡಿಎಸ್ ನಲ್ಲಿ ಏನಾಗಿದೆ ಎಂಬುದನ್ನು ನೋಡಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...