alex Certify BIG NEWS: ಜಂಟಿ ಸುದ್ದಿಗೋಷ್ಠಿಗೆ ಸಿದ್ಧತೆ; ಕುತೂಹಲ ಮೂಡಿಸಿದ ಜಾರಕಿಹೊಳಿ ಸಹೋದರರ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಂಟಿ ಸುದ್ದಿಗೋಷ್ಠಿಗೆ ಸಿದ್ಧತೆ; ಕುತೂಹಲ ಮೂಡಿಸಿದ ಜಾರಕಿಹೊಳಿ ಸಹೋದರರ ನಡೆ

ಗೋಕಾಕ್: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜಕೀಯ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಈ ನಡುವೆ ಜಾರಕಿಹೊಳಿ ಸಹೋದರರು ಜಂಟಿ ಸುದ್ದಿಗೋಷ್ಠಿಗೆ ಸಿದ್ಧತೆ ನಡೆಸಿದ್ದಾರೆ.

ಈ ಬಗ್ಗೆ ಗೋಕಾಕ್ ನಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ನಾಳೆ ಗೋಕಾಕ್ ಗೆ ಬರಲಿದ್ದಾರೆ. ಅವರು ಬಂದ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸಿ ಬಳಿಕ ಎರಡು ದಿನಗಳಲ್ಲಿ ನಾನು ಹಾಗೂ ರಮೇಶ್ ಜಂಟಿ ಸುದ್ದಿಗೋಷ್ಠಿ ನಡೆಸುತ್ತೇವೆ. ಸುದ್ದಿಗೋಷ್ಠಿಯಲ್ಲಿ ಎಲ್ಲಾ ವಿಚಾರಗಳನ್ನು ಕ್ಲಿಯರ್ ಮಾಡುತ್ತೇವೆ ಎಂದರು.

ಮಾಧ್ಯಮಗಳಲ್ಲಿ ಕೆಲ ಸುದ್ದಿಗಳು ಹರಿದಾಡುತ್ತಿವೆ. ಈ ಬಗ್ಗೆಯೂ ನಾವು ಸ್ಪಷ್ಟಪಡಿಸುತ್ತೇವೆ. ಪಕ್ಷದ ಕೆಲವರು ಬೆನ್ನಿಗೆ ಚೂರಿ ಹಾಕಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ನಾನು ಸಚಿವ ಸ್ಥಾನ ನೀಡುವಂತೆ ಕೇಳಿಲ್ಲ. ಈ ನಿಟ್ಟಿನಲ್ಲಿ ನಾವು ಒತ್ತಾಯಿಸಿಯೂ ಇಲ್ಲ. ನನಗೆ ಯಾರೂ ಕೂಡ ಸಚಿವ ಸ್ಥಾನದ ಆಫರ್ ಕೂಡ ಮಾಡಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...