alex Certify BIG NEWS: ಜನ ಬೆಂಬಲವಿಲ್ಲದೇ ಚುನಾವಣೆಯಲ್ಲಿ ಗೆಲುವು ಅಸಾಧ್ಯ; ಹಾನಗಲ್ ನಲ್ಲಿ ‘ಕೈ’ ಹಿಡಿಯಲು ಅಭ್ಯರ್ಥಿ ಕೆಲಸಗಳೇ ಕಾರಣ ಎಂದ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜನ ಬೆಂಬಲವಿಲ್ಲದೇ ಚುನಾವಣೆಯಲ್ಲಿ ಗೆಲುವು ಅಸಾಧ್ಯ; ಹಾನಗಲ್ ನಲ್ಲಿ ‘ಕೈ’ ಹಿಡಿಯಲು ಅಭ್ಯರ್ಥಿ ಕೆಲಸಗಳೇ ಕಾರಣ ಎಂದ ಸಿಎಂ ಬೊಮ್ಮಾಯಿ

ಮಂಡ್ಯ: ಉಪಚುನಾವಣೆ ನಡೆದಿದ್ದ ಎರಡು ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಗೆದ್ದು, ಮತ್ತೊಂದು ಕ್ಷೇತ್ರದಲ್ಲಿ ಸೋಲನುಭವಿಸಿದ್ದೇವೆ. ಈ ಫಲಿತಾಂಶವನ್ನು ಗಂಭೀರವಾಗಿ ಪರಿಗಣಿಸಿ, ಆಗಿರುವ ತಪ್ಪನ್ನು ಸರಿಪಡಿಸಿಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಹಾನಗಲ್ ಕ್ಷೇತ್ರದಲ್ಲಿ ನಿರೀಕ್ಷೆಯಷ್ಟು ಮತಗಳು ಬಂದಿಲ್ಲ. ಸಿ.ಎಂ.ಉದಾಸಿಗೆ ಸಲ್ಲಬೇಕಿದ್ದ ಮತ ಪಡೆಯಲು ಸಾಧ್ಯವಾಗಿಲ್ಲ. ಎಲ್ಲಿ ತಪ್ಪಾಗಿದೆ ಎಂಬ ಬಗ್ಗೆ ಚರ್ಚಿಸಿ, ಮುಂದಿನ ಚುನಾವಣೆ ಸಿದ್ಧತೆ ಮಾಡಿಕೊಳ್ಳುವುದಾಗಿ ತಿಳಿಸಿದರು.

ಕ್ರೆಡಿಟ್‌ ಕಾರ್ಡ್‌ ಬಳಸುತ್ತಿದ್ದೀರಾ…? ಹಾಗಾದ್ರೆ ಖಾಸಗಿ ಮಾಹಿತಿ ಸುರಕ್ಷಿತವಾಗಿರಲು ಅನುಸರಿಸಿ ಈ ಟಿಪ್ಸ್

ಕಾಂಗ್ರೆಸ್ ಅಭ್ಯರ್ಥಿಯ ಕೆಲಸಗಳು ಅವರ ಗೆಲುವಿಗೆ ಸಹಾಯ ಮಾಡಿದೆ. ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ 2-3 ವರ್ಷಗಳಿಂದ ಕೆಲಸ ಮಾಡಿದ್ದಾರೆ. ಹೀಗಾಗಿ ಕ್ಷೇತ್ರದ ಜನತೆ ಮಾನೆ ಕೈ ಹಿಡಿದಿದ್ದಾರೆ ಎಂದರು.

ಹಣ ಬಲದಿಂದಾಗಿ ಸಿಂದಗಿಯಲ್ಲಿ ಬಿಜೆಪಿ ಗೆದ್ದಿದೆ ಎಂಬ ಕುಮಾರಸ್ವಾಮಿ ಆರೋಪದಲ್ಲಿ ಹುರುಳಿಲ್ಲ. ಜನ ಬೆಂಬಲವಿಲ್ಲದೇ ಯಾವುದೇ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಹಣ ಬಲ, ತೋಳ್ಬಲಗಳಿಂದ ಚುನಾವಣೆ ಗೆಲ್ಲಬಹುದು ಎಂಬುದು ಕೇವಲ ತಪ್ಪು ಕಲ್ಪನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...