alex Certify BIG NEWS: ಜಾತ್ರೆಯಲ್ಲಿ ಕೆಂಡ ಹಾಯುವಾಗ ನೂಕು ನುಗ್ಗಲು; ಅವಘಡದಲ್ಲಿ 30ಕ್ಕೂ ಹೆಚ್ಚು ಜನರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಾತ್ರೆಯಲ್ಲಿ ಕೆಂಡ ಹಾಯುವಾಗ ನೂಕು ನುಗ್ಗಲು; ಅವಘಡದಲ್ಲಿ 30ಕ್ಕೂ ಹೆಚ್ಚು ಜನರಿಗೆ ಗಾಯ

ತುಮಕೂರು: ರಾಮಲಿಂಗೇಶ್ವರ, ಚೌಡೇಶ್ವರಿ ಜಾತ್ರೆಯಲ್ಲಿ ಕೆಂಡ ಹಾಯುವಾಗ ನೂಕುನುಗ್ಗಲು ಉಂಟಾಗಿ ಅವಘಡ ಸಂಭವಿಸಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ತುರುವೆಕೆರೆ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ.

35 ವರ್ಷಗಳ ಬಳಿಕ ನಡೆದ ರಾಮಲಿಂಗೇಶ್ವರ, ಚೌಡೇಶ್ವರಿ ಜಾತ್ರಾ ಮಹೋತ್ಸವದಲ್ಲಿ 50,000ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಕೊಂಡ ಹಾಯುವ ವೇಳೆ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಅಗ್ನಿಕುಂಡದ ಬೆಂಕಿ ತಗುಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳಿಗೆ ತುರುವೆಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...