alex Certify BIG NEWS: ಜಿಲ್ಲಾ ಪಂಚಾಯತ್ ಸದಸ್ಯನ ಹತ್ಯೆ ಪ್ರಕರಣ; ಮಾಜಿ ಸಚಿವ ವಿನಯ್ ಕುಲ್ಕರ್ಣಿಗೆ ಸುಪ್ರೀಂ ನಲ್ಲಿ ಹಿನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಿಲ್ಲಾ ಪಂಚಾಯತ್ ಸದಸ್ಯನ ಹತ್ಯೆ ಪ್ರಕರಣ; ಮಾಜಿ ಸಚಿವ ವಿನಯ್ ಕುಲ್ಕರ್ಣಿಗೆ ಸುಪ್ರೀಂ ನಲ್ಲಿ ಹಿನ್ನಡೆ

ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ.

ಸಿಬಿಐ ತನಿಖೆ ಪ್ರಶ್ನಿಸಿ ವಿನಯ್ ಕುಲ್ಕರ್ಣಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿ ಆದೇಶ ಹೊರಡಿಸಿತ್ತು. ಸಿಬಿಐ ತನಿಖೆ ಪ್ರಶ್ನಿಸಿ ವಿನಯ್ ಕುಲ್ಕರ್ಣಿ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇದೀಗ ವಿನಯ್ ಕುಲ್ಕರ್ಣಿ ಅರ್ಜಿ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...