alex Certify BIG NEWS: ಜೆಡಿಎಸ್‌ ಜೊತೆ ಸೇರಿಯೇ ನಾವು ಕೆಟ್ಟಿದ್ದು; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೆಡಿಎಸ್‌ ಜೊತೆ ಸೇರಿಯೇ ನಾವು ಕೆಟ್ಟಿದ್ದು; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಇನ್ನುಮುಂದೆ ಭವಿಷ್ಯದಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಇರುವುದಿಲ್ಲ. ರಾಜ್ಯಸಭೆ ಚುನಾವಣೆಯಲ್ಲಿ ನಾವು ಅಭ್ಯರ್ಥಿ ಹಾಕಿದ ಮೇಲೂ ಅವರು ಅಭ್ಯರ್ಥಿ ಕಣಕ್ಕಿಳಿಸಿದ್ಯಾಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಜೆಡಿಎಸ್ ಕಾರಣ. ಜೆಡಿಎಸ್ ನವರು ಅಭ್ಯರ್ಥಿಯನ್ನು ಹಾಕಿದ್ದೇ ಬಿಜೆಪಿ ಗೆಲ್ಲಲಿ ಎಂಬ ಉದ್ದೇಶದಿಂದ ಎಂದು ವಾಗ್ದಾಳಿ ನಡೆಸಿದರು.

ಎಂಪಿ ಎಲೆಕ್ಷನ್ ನಲ್ಲಿ ಜೆಡಿಎಸ್ ಜತೆ ಸೇರಿ ಕೆಟ್ಟಿದ್ದೇವೆ. ಮುಂದೆ ಭವಿಷ್ಯದಲ್ಲಿಯೂ ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಇರಲ್ಲ. ರಾಜ್ಯಸಭೆ ಚುನಾವಣೆಯಲ್ಲಿ ನಾವು ಮೊದಲು ಅಭ್ಯರ್ಥಿ ಹಾಕಿದರೂ ಜೆಡಿಎಸ್ ನವರು ಬೇಕಂತಲೇ ಅಭ್ಯರ್ಥಿ ಹಾಕಿದ್ದಾರೆ. ಹಾಗಾಗಿಯೇ ಬಿಜೆಪಿ ಗೆದ್ದಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...