alex Certify BIG NEWS: ಜೆಡಿಎಸ್ ಗೆ ಬಿಗ್ ಶಾಕ್; ಗುಬ್ಬಿ ಕ್ಷೇತ್ರದ 100ಕ್ಕೂ ಹೆಚ್ಚು ಕಾರ್ಯಕರ್ತರ ದಿಢೀರ್ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೆಡಿಎಸ್ ಗೆ ಬಿಗ್ ಶಾಕ್; ಗುಬ್ಬಿ ಕ್ಷೇತ್ರದ 100ಕ್ಕೂ ಹೆಚ್ಚು ಕಾರ್ಯಕರ್ತರ ದಿಢೀರ್ ರಾಜೀನಾಮೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆಯಲ್ಲಿರುವ ಜೆಡಿಎಸ್ ಗೆ ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದಲ್ಲಿ ಮತ್ತೊಂದು ಆಘಾತವಾಗಿದೆ. ನೂರಕ್ಕು ಹೆಚ್ಚು ಕಾರ್ಯಕರ್ತರು ದಿಢೀರ್ ರಾಜೀನಾಮೆ ಘೋಷಿಸಿದ್ದಾರೆ.

ಗುಬ್ಬಿ ಹಾಲಿ ಶಾಸಕ ಎಸ್.ಆರ್.‌ ಶ್ರೀನಿವಾಸ್ ಗೆ ಜೆಡಿಎಸ್ ನಲ್ಲಿ ಅನ್ಯಾಯವಾಗಿರುವುದನ್ನು ಖಂಡಿಸಿ 100ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕರ್ತರು ರಾಜೀನಾಮೆಗೆ ಸಜ್ಜಾಗಿದ್ದು, ಜೆಡಿಎಸ್ ಗೆ ಹೊಸತಲೆನೋವಿಗೆ ಕಾರಣವಾಗಿದೆ.

ಬೂತ್ ಮಟ್ಟದ ಕಾರ್ಯಕರ್ತರು ಕೂಡ ರಾಜೀನಾಮೆ ನೀಡಿದ್ದು, ಎಲ್ಲರೂ ವಾಸಣ್ಣ ಅಭಿಮಾನಿ ಬಳಗ ಸೇರಿದ್ದಾರೆ. ಗುಬ್ಬಿಯಲ್ಲಿ ಎಸ್.ಆರ್. ಶ್ರೀನಿವಾಸ್ ಬದಲು ಬೇರೊಬ್ಬರಿಗೆ ಟಿಕೆಟ್ ನೀಡಲು ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿರುವ ಹಿನ್ನೆಲೆಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ರಾಜ್ಯಸಭೆ ಚುನಾವಣೆಯಲ್ಲಿಯೂ ಶ್ರೀನಿವಾಸ್ ಅಡ್ಡಮತದಾನ ಮಾಡಿದ್ದರು. ಇದೀಗ ಕಾರ್ಯಕರ್ತರು ಕೂಡ ಜೆಡಿಎಸ್ ತೊರೆಯುತ್ತಿದ್ದು ಗುಬ್ಬಿಯಲ್ಲಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗುವ ಸಾಧ್ಯತೆ ದಟ್ಟವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...