alex Certify BIG NEWS: ಜೆಸಿಬಿ ಹರಿದು ಮೂವರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೆಸಿಬಿ ಹರಿದು ಮೂವರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ದುರಂತವೊಂದು ಸಂಭವಿಸಿದ್ದು, ಜೆಸಿಬಿ ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದಲ್ಲಿ ನಡೆದಿದೆ.

ಮೃತರು ಛತ್ತೀಸ್ ಗಢ ಮೂಲದವರಾಗಿದ್ದಾರೆ. ವಿಷ್ಣು (26), ಶಿವರಾಮ್ (28) ಬಲರಾಮ್ (30) ಮೃತರು. ಜಮೀನಿನಲ್ಲಿ ಬೋರ್ವೆಲ್ ಕೊರೆದು ಕಾಲುದಾರಿಯಲ್ಲಿ ಮೂವರು ಮಲಗಿದ್ದರು. ರಾತ್ರಿ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ ಮೂವರ ಮೇಲೆ ಹರಿದಿದೆ.

ನಿಲವಂಜಿ ಗ್ರಾಮದ ನಿವಾಸಿ ಬಾಲಯ್ಯ ಎಂಬುವವರಿಗೆ ಸೇರಿದ ಜೆಸಿಬಿ ಇದಾಗಿದೆ. ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...