alex Certify BIG NEWS: ಜ್ಯೋತಿಷಿ ಕಟ್ಟಿಹಾಕಿ ಚಿನ್ನಾಭರಣ ದೋಚಿದ್ದ ಪ್ರಕರಣ; ಖ್ಯಾತ ಜೋತಿಷಿ ಮಹಿಳಾ ಪಿಎ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜ್ಯೋತಿಷಿ ಕಟ್ಟಿಹಾಕಿ ಚಿನ್ನಾಭರಣ ದೋಚಿದ್ದ ಪ್ರಕರಣ; ಖ್ಯಾತ ಜೋತಿಷಿ ಮಹಿಳಾ ಪಿಎ ಬಂಧನ

ಬೆಂಗಳೂರು: ಇತ್ತೀಚೆಗೆ ಖ್ಯಾತ ಜ್ಯೋತಿಷಿಯ ಮನೆಗೆ ನುಗ್ಗಿದ್ದ ಖದೀಮರು ಜ್ಯೋತಿಷಿ ಕೈಕಾಲು ಕಟ್ಟಿಹಾಕಿ ಹಲ್ಲೆ ನಡೆಸಿ, ಚಿನ್ನಾಭರಣ, ಹಣ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜ್ಯೋತಿಷಿಯ ಮಹಿಳಾ ಪಿಎಯನ್ನು ಬಂಧಿಸಲಾಗಿದೆ.

ಜ್ಯೋತಿಷಿ ಪ್ರಮೋದ್ ಮನೆ ದರೋಡೆಗೆ ಅವರ ಪಿಎ ಮೇಘನಾ ಎಂಬ ಮಹಿಳೆಯೇ ಸುಪಾರಿ ಕೊಟ್ಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಮೇಘನಾ ಹಾಗೂ ಆಕೆಯ ಗ್ಯಾಂಗ್ ನ್ನು ಕೆಂಗೇರಿ ಪೊಲೀಸರು ತಮಿಳುನಾಡಿನ ಸೇಲಂನಲ್ಲಿ ಬಂಧಿಸಿದ್ದಾರೆ.

ತಮಿಳುನಾಡು ಮೂಲದ ಮೇಘನಾ ಜ್ಯೋತಿಷಿ ಪ್ರಮೋದ್ ಪಿಎ ಆಗಿ ಕೆಲಸ ಮಾಡುತ್ತಿದ್ದರು. ಜ್ಯೋತಿಷಿ ಬಳಿ ಸಾಲ ಕೇಳಿದ್ದಳು. ಆದರೆ ಜ್ಯೋತಿಷಿ ಸಾಲ ನೀಡಲು ನಿರಾಕರಿಸಿದ್ದರು. ಇದೇ ಕಾರಣಕ್ಕೆ ದರೋಡೆ ಪ್ಲಾನ್ ಮಾಡಿ, ಮೂವರಿಗೆ ಸುಪಾರಿ ಕೊಟ್ಟಿದ್ದಳು ಎನ್ನಲಾಗಿದೆ.

ಮೇಘನಾ ಜ್ಯೋತಿಷಿಯ ಮನೆಯಲ್ಲಿದ್ದಾಗಲೇ ಎಂಟ್ರಿ ಕೊಟ್ಟಿದ್ದ ಗ್ಯಾಂಗ್ ಜ್ಯೋತಿಷ ಕೇಳುವ ನೆಪದಲ್ಲಿ ಆಗಮಿಸಿತ್ತು. ಜ್ಯೋತಿಷಿ ಪ್ರಮೋದ್ ಅವರನ್ನು ಥಳಿಸಿ, ಕೈಕಾಲು ಕಟ್ಟಿಹಾಕಿ 250 ಗ್ರಾಂ ಚಿನ್ನಾಭರಣ, 5 ಲಕ್ಷ ನಗದು ದೋಚಿ ಪರಾರಿಯಾಗಿದ್ದರು. ದುಷ್ಕರ್ಮಿಗಳ ಚಲನವಲನ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪಿಎ ಮೇಘನಾ ಘಟನೆ ಬಳಿಕ ತಮಿಳುನಾಡಿಗೆ ಪರಾರಿಯಾಗಿದ್ದಳು. ಅನುಮಾನಗೊಂಡ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...