alex Certify BIG NEWS: ಟಿಪ್ಪು ಬಗ್ಗೆ ನಾವು ಓದಿದ್ದು ಸುಳ್ಳು, ಅಸತ್ಯ; ಪ್ರಮೋದ್ ಮುತಾಲಿಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟಿಪ್ಪು ಬಗ್ಗೆ ನಾವು ಓದಿದ್ದು ಸುಳ್ಳು, ಅಸತ್ಯ; ಪ್ರಮೋದ್ ಮುತಾಲಿಕ್

ಬೆಂಗಳೂರು: ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಪಾಠವನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ.

ಟಿಪ್ಪು ಬಗ್ಗೆ ನಾವು ಓದಿದ್ದೆಲ್ಲವೂ ಅಸತ್ಯ. ಆತ ಹಿಂದೂಗಳನ್ನು ಮತಾಂತರ ಮಾಡಿದ ವ್ಯಕ್ತಿ. ಕನ್ನಡ ವಿರೋಧಿ, ಕ್ರೂರಿ. ಕೊಡಗು, ಕೇರಳಕ್ಕೆ ಹೋದರೆ ಅಲ್ಲಿರುವ ಬ್ಯಾರಿಗಳು ಸಿಗ್ತಾರೆ. ಅವರೆಲ್ಲರೂ ಹಿಂದೆ ಹಿಂದೂಗಳಾಗಿದ್ದರು, ಆದರೆ ಮತಾಂತರ ಆದವರು. ಹಿಂದೆ ಆದ ತಪ್ಪು ಮತ್ತೆ ಆಗುವುದು ಬೇಡ. ಟಿಪ್ಪು ಪಾಠವನ್ನು ಮೊದಲು ಪಠ್ಯದಿಂದ ತೆಗೆಯಬೇಕು ಎಂದು ಹೇಳಿದರು.

ಇದೇ ವೇಳೆ ಹಿಜಾಬ್ ವಿಚಾರವಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಬಗ್ಗೆ ಮಾತನಾಡಿದ ಮುತಾಲಿಕ್, ಹಿಜಾಬ್, ದುಪ್ಪಟ್ಟಾ ಜತೆ ಸ್ವಾಮೀಜಿ ಪೇಟಾ ಹೋಲಿಸಬಾರದು. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮಠಗಳ ಸರ್ಕಾರೀಕರಣ ಮಾಡಲು ಯತ್ನಿಸಿದರು. ಸಿದ್ದರಾಮಯ್ಯ ಈಗಾಗಲೇ ಕೇಸರಿ ಶಾಲು ಬಿಸಾಕಿದ್ದಾರೆ. ದೇವಸ್ಥಾನದ ಬಗ್ಗೆಯೂ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಕಿಡಿಕಾರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...