alex Certify BIG NEWS: ಡಕೋಟಾ ಬಸ್ ಹತ್ತಲು ಸಿದ್ಧರಾಗಿದ್ದಾರೆ; ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಗೆ ಹೆಚ್.ಡಿ. ರೇವಣ್ಣ ಲೇವಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಕೋಟಾ ಬಸ್ ಹತ್ತಲು ಸಿದ್ಧರಾಗಿದ್ದಾರೆ; ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಗೆ ಹೆಚ್.ಡಿ. ರೇವಣ್ಣ ಲೇವಡಿ

ಹಾಸನ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಸಜ್ಜಾಗಿರುವ ಮಾಜಿ ಶಾಸಕ ಶಿವಲಿಂಗೇಗೌಡ ವಿರುದ್ಧ ಮಾಜಿ ಸಚಿವ ಹೆಚ್.ಡಿ. ರೇವಣ್ಣ ವ್ಯಂಗ್ಯವಾಡಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಶಿವಲಿಂಗೇಗೌಡ ಡಕೋಟಾ ಬಸ್ ಹತ್ತಲು ಮುಂದಾಗಿದ್ದಾರೆ. ಕಾಂಗ್ರೆಸ್ ನವರು ತಮ್ಮ ಡಕೋಟಾ ಬಸ್ ಹತ್ತಲಿ ಅಂತಾ ಕಾಯುತ್ತಿದ್ದಾರೆ. ಬಸ್ ಎಲ್ಲಿ ನಿಲ್ಲುತ್ತೋ ಗೊತ್ತಿಲ್ಲ ಎಂದರು.

ಅರಸಿಕೆರೆ ಶಾಸಕರಾಗಿದ್ದ ಶಿವಲಿಂಗೇಗೌಡರನ್ನು 15 ವರ್ಷಗಳ ಕಾಲ ಸಾಕಿದ್ದೇನೆ. ಈಗ ಶಿರಸಿಗೆ ಹೋಗಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ನಾನೇ ಸಾಕಿದಾ ಗಿಣಿ ಎಂದು ಅರಸಿಕೆರೆ ಜನ ಹೇಳುತ್ತಿದ್ದಾರೆ. ದೇವರೇ ಶಿಕ್ಷೆ ಕೊಡುವ ಕಾಲ ಬರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...