alex Certify BIG NEWS: ಡಿಕೆಶಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಅಶೋಕ್ ಪಟ್ಟಣಗೆ ನೋಟೀಸ್ ಜಾರಿ; ಅಂತದ್ದೇನೂ ಹೇಳಿಲ್ಲ ಎಂದ ಕೈ ಮುಖಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಕೆಶಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಅಶೋಕ್ ಪಟ್ಟಣಗೆ ನೋಟೀಸ್ ಜಾರಿ; ಅಂತದ್ದೇನೂ ಹೇಳಿಲ್ಲ ಎಂದ ಕೈ ಮುಖಂಡ

ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಅಶೋಕ್ ಪಟ್ಟಣ ಅವರಿಗೆ ಕಾಂಗ್ರೆಸ್ ಶಿಸ್ತು ಸಮಿತಿ ನೋಟೀಸ್ ನೀಡಿದೆ.

ಅಧ್ಯಕ್ಷರ ಘನತೆಗೆ ಕುಂದು ಹಾಗೂ ಪಕ್ಷಕ್ಕೆ ಮಾತಿನಿಂದ ಹಾನಿಯಾಗಿದೆ ಎಂದು ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್, ಅಶೋಕ ಪಟ್ಟಣ ಅವರಿಗೆ ನೋಟಿಸ್ ನೀಡಿದ್ದಾರೆ. 7 ದಿನಗಳಲ್ಲಿ ನೋಟೀಸ್ ಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ.

ಇತ್ತೀಚೆಗಷ್ಟೇ ವಿಪಕ್ಷ ನಾಯಕ ಸಿದ್ದರಾಮಯ್ಯ ನಡೆಸಿದ್ದ ಸುದ್ದಿಗೋಷ್ಠಿ ವೇಳೆ ಮಾತನಾಡಿದ್ದ ಅಶೋಕ್ ಪಟ್ಟಣ, ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡಿದ್ದರು.

ಆದರೆ ಕಾಂಗ್ರೆಸ್ ನಿಂದ ನೋಟಿಸ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಅಶೋಕ್ ಪಟ್ಟಣ, ನಾನು ತಪ್ಪು ಮಾಡಿಲ್ಲ, ನಾನು ಹಾಗೂ ಡಿ.ಕೆ.ಶಿವಕುಮಾರ್ ಸ್ನೇಹಿತರು. ಅಂದು ನಾನು ಸಿದ್ದರಾಮಯ್ಯ ಬಳಿ ಪುಲಕೇಶಿ ನಗರದಿಂದ ಜನ ಬಂದಿರುವ ಬಗ್ಗೆ ಮಾತನಾಡಿದ್ದೆ ಹೊರತು ಬೇರೇನೂ ಹೇಳಿಲ್ಲ. ಪಕ್ಷಕ್ಕೆ ಧಕ್ಕೆ ತರುವಂತೆ ಮಾತನಾಡಿಯೂ ಇಲ್ಲ. ಎಲ್ಲದಕ್ಕೂ ಉತ್ತರ ಕೊಡಲು ಸಿದ್ಧ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...