alex Certify BIG NEWS: ಡಿಕೆಶಿ ಸಾಧು-ಸಂತರ ಜೊತೆ ಓಡಾಡ್ತಾರಾ….? ತಿರುಗೇಟು ನೀಡಿದ ಎಸ್.ಆರ್.ವಿಶ್ವನಾಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಕೆಶಿ ಸಾಧು-ಸಂತರ ಜೊತೆ ಓಡಾಡ್ತಾರಾ….? ತಿರುಗೇಟು ನೀಡಿದ ಎಸ್.ಆರ್.ವಿಶ್ವನಾಥ್

ಬೆಂಗಳೂರು: ಎಸ್.ಆರ್.ವಿಶ್ವನಾಥ್ ರೌಡಿಗಳ ಜೊತೆ ಓಡಾಡುತ್ತಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕ ಎಸ್.ಆರ್.ವಿಶ್ವನಾಥ್, ಡಿ.ಕೆ.ಶಿಯೇನು ಸಾಧು-ಸಂತರ ಜೊತೆ ಓಡಾಡುತ್ತಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

ತಮ್ಮ ಹತ್ಯೆಗೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಸುಪಾರಿ ನೀಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಆರ್.ವಿಶ್ವನಾಥ್, ಡಿ.ಕೆ.ಶಿ ಆರೋಪಕ್ಕೆ ಪ್ರತಿಕ್ರಿಯಿಸಿ, ಡಿ.ಕೆ.ಶಿವಕುಮಾರ್ ಏನು ಎಂಬುದು ಎಲ್ಲರಿಗೂ ಗೊತ್ತು. ಅವರೇನು ಸಾಧು-ಸಂತರ ಜೊತೆ ಓಡಾಡ್ತಾರಾ? ಒಬ್ಬ ಶಾಸಕರ ಹತ್ಯೆಗೆ ಸುಪಾರಿ ಕೊಟ್ಟಂತವರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದ ಮೇಲೆ ಅರ್ಥ ಮಾಡಿಕೊಳ್ಳಬೇಕು ಎಂದರು.

ಡಿ.ಕೆ.ಶಿವಕುಮಾರ್ ಏನು? ಅವರ ಹಿನ್ನೆಲೆ ಏನು ಎಂಬುದು ಎಲ್ಲರಿಗೂ ಗೊತ್ತು. ಅವರ ಬಗ್ಗೆ ಈಗ ನಾನು ಮಾತನಾಡಲ್ಲ. ಯಾಕೆಂದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿರುವವರು, ತುಂಬಾ ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡವರು. ಹಾಗಾಗಿ ಗೌರವಾನ್ವಿತ ಸ್ಥಾನದಲ್ಲಿರುವವರ ಬಗ್ಗೆ ನಾನು ಏನೂ ಹೇಳಲ್ಲ. ಆದರೆ ಅವರದ್ದೇ ಪಕ್ಷದ ಶಾಸಕರಾಗಿದ್ದ ಅಖಂಡ ಶ್ರೀನಿವಾಸ್ ಮನೆ ಮೇಲೆ ಬೆಂಕಿ ಪ್ರಕರಣ ನಡೆದಾಗ ಅವರ ಪರವಾಗಿಯೇ ನಿಲ್ಲದವರು, ಇನ್ನು ನನ್ನ ಪರವಾಗಿ ಡಿ.ಕೆ.ಶಿವಕುಮಾರ್ ಮಾತನಾಡುತ್ತಾರಾ? ಅದನ್ನು ನಾನು ನಿರೀಕ್ಷಿಸಬಹುದೇ ನೀವೇ ಯೋಚಿಸಿ ನೋಡಿ ಎಂದರು.

ಗೋಪಾಲಕೃಷ್ಣ ನನ್ನ ಹತ್ಯೆಗೆ ಸುಪಾರಿ ಕೊಟ್ಟಿದ್ದರು ಎಂಬುದು ಬಯಲಾಗಿದೆ. ಈ ಬಗ್ಗೆ ನಾನು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ಪ್ರಕರಣದ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಯಲಿ. ಗೋಪಾಲಕೃಷ್ಣ ಹಿಂದೆ ಯಾರಿದ್ದಾರೆಂಬುದು ಬಹಿರಂಗವಾಗಲಿ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಿ ಎಂದು ಒತ್ತಾಯಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...