alex Certify BIG NEWS: ಡಿ.ಕೆ.ಶಿ. ವಿರುದ್ಧ ನಾನು ಮಾತನಾಡಿಯೇ ಇಲ್ಲ; ನಾನು ಹೇಳಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ; ಉಲ್ಟಾ ಹೊಡೆದ ಉಗ್ರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ.ಕೆ.ಶಿ. ವಿರುದ್ಧ ನಾನು ಮಾತನಾಡಿಯೇ ಇಲ್ಲ; ನಾನು ಹೇಳಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ; ಉಲ್ಟಾ ಹೊಡೆದ ಉಗ್ರಪ್ಪ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಕಾಂಗ್ರೆಸ್ ನಾಯಕರಾದ ವಿ.ಎಸ್.ಉಗ್ರಪ್ಪ ಹಾಗೂ ಸಲೀಂ ಸ್ಫೋಟಕ ಹೇಳಿಕೆ ವಿಚಾರವಾಗಿ ಪ್ರತಿಕ್ರಿಸಿರುವ ಉಗ್ರಪ್ಪ, ನಾನು ಡಿ.ಕೆ.ಶಿವಕುಮಾರ್ ವಿರುದ್ಧ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಎಸ್. ಉಗ್ರಪ್ಪ, ಸಲೀಂ ಹೇಳಿಕೆಗಳಿಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ನಾನು ಹೇಳಿಕೆ ನೀಡಿದ್ದು ಸಾಬೀತಾದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದಿದ್ದಾರೆ.

ಕೋಲ್ಕತ್ತಾದಲ್ಲಿ ತಲೆಯೆತ್ತಿದೆ ದುಬೈನ ಪ್ರಸಿದ್ಧ ಬುರ್ಜ್​ ಕಲೀಫಾ…..!

ಅಲ್ಲದೇ ಡಿ.ಕೆ.ಶಿವಕುಮಾರ್ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಬಗ್ಗೆ ಆ ರೀತಿ ಮಾತನಾಡಬೇಡ, ಅವರು ಯಾವ ಪರ್ಸಂಟೇಜ್ ಗೂ ಬೆಂಬಲ ನೀಡಲ್ಲ ಎಂದು ಸಲೀಂ ಗೆ ಹೇಳಿದ್ದೇನೆ ಹೊರತು ನಾನು ಅವರ ಬಗ್ಗೆ ಮಾತನಾಡಿಲ್ಲ. ಇನ್ನು ಸಲೀಂ ಹೇಳಿಕೆ ಬಗ್ಗೆ ಅವ್ರನ್ನೇ ಕೇಳಿ ಎಂದು ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿಯೇ ನಡೆದ ಸಭೆ ವೇಳೆ ವಿ.ಎಸ್.ಉಗ್ರಪ್ಪ ಹಾಗೂ ಸಲೀಂ ಡಿ.ಕೆ.ಶಿವಕುಮಾರ್ ಬಗ್ಗೆ ಚರ್ಚೆ ನಡೆಸಿದ್ದು, ಡಿಕೆಶಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಿದ್ದರಾಮಯ್ಯ ಖಡಕ್ ವ್ಯಕ್ತಿಯಂದು ಹೊಗಳಿದ್ದರು. ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ. 6-8 ಪರ್ಸೆಂಟ್ ಇರುವುದನ್ನು 12 ಪರ್ಸೆಂಟ್ ಮಾಡಿದ್ದಾರೆ. ಕೋಟಿ ಕೋಟಿ ಡೀಲ್ ಮಾಡುತ್ತಾರೆ ಎಂದು ಸಲೀಂ ಹೇಳಿದ್ದರು ಇದಕ್ಕೆ ಸೊಪ್ಪು ಹಾಕಿದ ಉಗ್ರಪ್ಪ ನಾವೆಲ್ಲ ಪಟ್ಟು ಹಿಡಿದು ಡಿಕೆಶಿಯನ್ನು ಅಧ್ಯಕ್ಷರನ್ನಾಗಿ ಮಾಡಿದೆವು ಈಗ ನಮ್ಮ ಬುಡಕ್ಕೆ ಇಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಅದರೆ ಈಗ ಉಲ್ಟಾ ಹೊಡೆದಿರುವ ಉಗ್ರಪ್ಪ ನಾನು ಹಾಗೆ ಹೇಳಿಯೇ ಇಲ್ಲ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...