alex Certify BIG NEWS: ಡ್ರಗ್ಸ್ ಪ್ರಕರಣ; ಆಂಕರ್ ಅನುಶ್ರೀ ಹೆಸರು ಕೈಬಿಟ್ಟಿದ್ದೇಕೆ…? ಕಾರಣ ಬಿಚ್ಚಿಟ್ಟ ಸಚಿವ ಮಾಧುಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡ್ರಗ್ಸ್ ಪ್ರಕರಣ; ಆಂಕರ್ ಅನುಶ್ರೀ ಹೆಸರು ಕೈಬಿಟ್ಟಿದ್ದೇಕೆ…? ಕಾರಣ ಬಿಚ್ಚಿಟ್ಟ ಸಚಿವ ಮಾಧುಸ್ವಾಮಿ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ನಟಿ ಅನುಶ್ರೀ ಹೆಸರು ಕೇಳಿಬಂದಿದ್ದು, ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಅನುಶ್ರೀ ವಿರುದ್ಧ ಆರೋಪ ಕೇಳಿಬಂದರೂ ಕೂಡ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸದೇ ಕೈಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಹೆಸರು ಕೈಬಿಟ್ಟಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಮಾಧುಸ್ವಾಮಿ, ಅನುಶ್ರೀ ವಿರುದ್ಧ ಸಾಕ್ಷಾಧಾರ ಇಲ್ಲದಿರುವ ಕಾರಣಕ್ಕೆ ಪ್ರಕರಣದಿಂದ ಅವರ ಹೆಸರು ಕೈಬಿಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರು ಹೇಳಿದ್ದಾರೆ ಎಂದಿದ್ದಾರೆ.

ಪೊಲೀಸರನ್ನೇ ದೋಚಿದ್ದ ಕಳ್ಳರು ಅಂದರ್

ಪ್ರಕರಣದ ಬಗ್ಗೆ ಪೊಲೀಸರಿಗೆ ತನಿಖೆಯನ್ನು ಹೀಗೆಯೇ ಮಾಡಿ. ಇಂತವರನ್ನು ಕೇಸಲ್ಲಿ ಫಿಕ್ಸ್ ಮಾಡಿ ಎನ್ನಲಾಗಲ್ಲ. ನಾರ್ಕೊಟಿಕ್ ಕೇಸ್ ನಲ್ಲಿ ಪೊಲೀಸರು ಪ್ರಭಾವದಿಂದ ಹೆಸರು ಕೈಬಿಡಲಾಗಲ್ಲ. ಒಂದು ವೇಳೆ ಹಾಗಾದರೆ ಕೋರ್ಟ್ ನಲ್ಲಿ ಪ್ರಶ್ನೆ ಮಾಡಬಹುದು. ಪ್ರಕರಣದಿಂದ ಅನುಶ್ರೀಯನ್ನು ಕೈಬಿಟ್ಟಿರುವುದರ ಹಿಂದೆ ಯಾವುದೇ ಪ್ರಭಾವವಿದೆ ಎಂದು ನನಗೆ ಅನಿಸುತ್ತಿಲ್ಲ. ಸಾಕ್ಷಾಧಾರಗಳ ಕೊರತೆಯಿಂದ ಅವರ ಹೆಸರು ಕೈಬಿಡಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತರೇ ಸ್ಪಷ್ಟಪಡಿಸಿದ್ದಾರೆ. ಜನರು ಒಬ್ಬೊಬ್ಬರು ಒಂದೊಂದು ರೀತಿ ತಮಗನಿಸಿದಂತೆ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...