alex Certify BIG NEWS: ತಹಶೀಲ್ದಾರ್ ಕಚೇರಿಯಲ್ಲಿಯೇ ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆಗೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಹಶೀಲ್ದಾರ್ ಕಚೇರಿಯಲ್ಲಿಯೇ ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆಗೆ ಯತ್ನ

ದಾವಣಗೆರೆ: ಗ್ರಾಮ ಪಂಚಾಯತ್ ಸದಸ್ಯರೊಬ್ಬರು ತಹಶೀಲ್ದಾರ್ ಕಚೇರಿಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ.

ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯತಿ ಸದಸ್ಯ ಲೋಕೇಶ್ ನಾಯ್ಕ್, ತಹಶೀಲ್ದಾರ್ ಕಚೇರಿಯಲ್ಲಿಯೇ ವಿಷ ಸೇವಿಸಿದ್ದಾರೆ. ಜಮೀನು ವಿವಾದ ಕುರಿತ ಆದೇಶ ತನ್ನ ಪರವಾಗಿ ಬರಲಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೆಲ ವರ್ಷಗಳಿಂದ ಸಂಬಂಧಿಕರಲ್ಲಿಯೇ ಜಮೀನು ವಿವಾದ ನಡೆದಿತ್ತು. ಈ ಕುರಿತ ಆದೇಶ ಲೋಕೇಶ್ ಗೆ ವಿರುದ್ಧವಾಗಿ ಬಂದಿದೆ. ಇರುವ ಸ್ವಲ್ಪ ಜಮೀನನ್ನು ಬೇರೆಯವರಿಗೆ ಬಿಡಬೇಕಾದ ಸ್ಥಿತಿ ಬಂದರೆ ತಾನು ಬದುಕುವುದಾದರೂ ಹೇಗೆ? ಕುಟುಂಬ ನಿರ್ವಹಣೆ ಹೇಗೆ ಎಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವಿಷ ಸೇವಿಸಿ ಅಸ್ವಸ್ಥರಾದ ಲೋಕೇಶ್ ನಾಯ್ಕ್ ಅವರನ್ನು ನ್ಯಾಮತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಇದೀಗ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...