alex Certify BIG NEWS: ತುಮಕೂರು ಘಟನೆ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ; ಸರ್ಕಾರಿ ಆಸ್ಪತ್ರೆಗಳಿಗೆ ಖಡಕ್ ಮಾರ್ಗಸೂಚಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತುಮಕೂರು ಘಟನೆ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ; ಸರ್ಕಾರಿ ಆಸ್ಪತ್ರೆಗಳಿಗೆ ಖಡಕ್ ಮಾರ್ಗಸೂಚಿ ಪ್ರಕಟ

ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷದಿಂದ ತಾಯಿ ಹಾಗೂ ಅವಳಿ ಶಿಶುಗಳ ಸಾವು ಪ್ರಕರಣದ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಖಡಕ್ ಮಾರ್ಗಸೂಚಿ ಪ್ರಕಟಿಸಿದೆ.

ರೋಗಿಯ ತುರ್ತು ಸಂದರ್ಭದಲ್ಲಿ ಯಾವುದೇ ದಾಖಲೆಗಳನ್ನು ಕೇಳದೇ ಮೊದಲು ಚಿಕಿತ್ಸೆ ನೀಡಬೇಕು. ತಾಯಿ ಕಾರ್ಡ್ ಆಧಾರ್ ಕಾರ್ಡ್, ಪಡಿತರ ಚೀಟಿ ಇತರೆ ಯಾವುದೇ ದಾಖಲೆಗಳ ಅಗತ್ಯವಿಲ್ಲ. ರೋಗಿ ಬಳಿ ಯಾವುದೇ ದಾಖಲೆಗಳು ಇಲ್ಲದಿದ್ದರೂ ಚಿಕಿತ್ಸೆ ನೀಡುವುದು ವೈದ್ಯರು, ಸೈದ್ಯಕೀಯ ಸಿಬ್ಬಂದಿಗಳ ಕರ್ತವ್ಯ.

ಆರೋಗ್ಯ ಸೇವೆ ನೀಡುವಾಗ ರೋಗಿಯ ರಾಷ್ಟ್ರೀಯತೆ, ವರ್ಗ, ಜಾತಿ, ಆರ್ಥಿಕ ಸ್ಥಿತಿಯನ್ನು ಆಸ್ಪತ್ರೆ ಸಿಬ್ಬಂದಿಗಳು ಅವಲಂಬಿಸಬಾರದು. ರೋಗಿಯ ನೋವು ಸಂಕಟ ನಿವಾರಿಸುವುದು ವೈದ್ಯರ ಕರ್ತವ್ಯ. ತುಮಕೂರಿನಲ್ಲಿ ಸಂಭವಿಸಿದಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಲಬೇಕು. ಮರುಕಳಿಸಿದರೆ ಅಧಿಕಾರಿಗಳು, ವೈದ್ಯರು, ಸಿಬ್ಬಂದಿಗಳನ್ನು ಸೇವೆಯಿಂದ ವಜಾ ಮಾಡಲಾಗುವುದು. ಇಲ್ಲವೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...