alex Certify BIG NEWS: ತೂಗು ಸೇತುವೆ ಕುಸಿತ ಪ್ರಕರಣ; ಮೊರ್ಬಿಗಿಂದು ಪ್ರಧಾನಿ ನರೇಂದ್ರ ಮೋದಿ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತೂಗು ಸೇತುವೆ ಕುಸಿತ ಪ್ರಕರಣ; ಮೊರ್ಬಿಗಿಂದು ಪ್ರಧಾನಿ ನರೇಂದ್ರ ಮೋದಿ ಭೇಟಿ

ಗುಜರಾತಿನ ಮೊರ್ಬಿಯಲ್ಲಿ ಭಾನುವಾರ ಸಂಜೆ ತೂಗು ಸೇತುವೆ ಕುಸಿದು ಬಿದ್ದ ಪರಿಣಾಮ 134 ಮಂದಿ ಮೃತಪಟ್ಟಿದ್ದಾರೆ. ಶತಮಾನಗಳಷ್ಟು ಹಳೆಯದಾದ ಈ ಸೇತುವೆಯನ್ನು ನವೀಕರಣಗೊಳಿಸಿ ಐದು ದಿನಗಳ ಹಿಂದಷ್ಟೇ ಸಾರ್ವಜನಿಕ ಬಳಕೆಗೆ ಮುಕ್ತ ಮಾಡಲಾಗಿದ್ದು, ಈಗ ಕುಸಿದು ಬಿದ್ದು ಘೋರ ದುರಂತ ಸಂಭವಿಸಿದೆ.

ಭಾನುವಾರ ರಜಾ ದಿನವಾಗಿದ್ದ ಕಾರಣ ಮಹಿಳೆಯರು, ಮಕ್ಕಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು, ಅಗತ್ಯಕ್ಕಿಂತ ಹೆಚ್ಚು ಜನ ಸೇತುವೆ ಮೇಲೆ ಇದ್ದ ಕಾರಣ ಭಾರ ತಡೆಯಲಾರದೆ ಕುಸಿದು ಬಿದ್ದಿದೆ ಎನ್ನಲಾಗಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಇಂದು ಕೂಡಾ ಮುಂದುವರೆದಿದೆ.

ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮೊರ್ಬಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಗುಜರಾತಿನಲ್ಲಿಯೇ ಇರುವ ಅವರು ಸೋಮವಾರದಂದು ಗಾಂಧಿನಗರದ ರಾಜ ಭವನದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ರಕ್ಷಣಾ ಕಾರ್ಯಾಚರಣೆಯ ಮಾಹಿತಿ ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...