alex Certify BIG NEWS: ದತ್ತಪೀಠದಲ್ಲಿನ ಗೋರಿ ಸ್ಥಳಾಂತರಿಸಿ; ಸಚಿವ ಸುನೀಲ್ ಕುಮಾರ್ ಖಡಕ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದತ್ತಪೀಠದಲ್ಲಿನ ಗೋರಿ ಸ್ಥಳಾಂತರಿಸಿ; ಸಚಿವ ಸುನೀಲ್ ಕುಮಾರ್ ಖಡಕ್ ಸೂಚನೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ಪೂಜಾ ಕೈಂಕರ್ಯಕ್ಕೆ ಅರ್ಚಕರ ನೇಮಕಕ್ಕೆ ಅವಕಾಶ ನೀಡಿ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಇದೀಗ ದತ್ತಪೀಠದ ಸುತ್ತಮುತ್ತಲಿನ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಗೋರಿಗಳನ್ನು ಸ್ಥಳಾಂತರ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಆದೇಶ ನೀಡಿದ್ದಾರೆ.

ದತ್ತಪೀಠದಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ಮಾಡಿಕೊಡಬೇಕು. ಈ ಹಿನ್ನೆಲೆಯಲ್ಲಿ ದತ್ತಪೀಠದಲ್ಲಿ ಅನಗತ್ಯವಾಗಿ ನಿರ್ಮಾಣ ಮಾಡಿರುವ ಗೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರ ಮಾಡುವಂತೆ ಸೂಚಿಸಿದ್ದೇನೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ನಿಮ್ಮನ್ನು ಬೆರಗಾಗಿಸುತ್ತೆ ಮೌಂಟ್ ಎವರೆಸ್ಟ್‌ ನ ಈ ರುದ್ರರಮಣೀಯ ದೃಶ್ಯ

ದತ್ತಪೀಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಸಚಿವರು, ದತ್ತಪೀಠದ ಹೋರಾಟದ ಮೂಲಕವೇ ನಾನು ಗುರುತಿಸಿಕೊಂಡಿದ್ದೇನೆ. ದತ್ತಪೀಠದಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಕೋರ್ಟ್ ಅವಕಾಶ ನೀಡಿರುವುದು ಸ್ವಾಗತಾರ್ಹ. ದತ್ತಾತ್ರೇಯ ಪೀಠ ಬೇರೆ, ನಾಗೇನಹಳ್ಳಿಯಲ್ಲಿರುವ ಬಾಬಾಬುಡನ್ ದರ್ಗಾ ಬೇರೆ. ಈ ವಿಚಾರ ದಾಖಲೆಗಳಲ್ಲೂ ಸಾಬೀತಾಗಿದೆ. ಹೀಗಾಗಿ ದತ್ತಪೀಠದಲ್ಲಿ ಹಿಂದೂಗಳಿಂದ ಪೂಜೆ ನಡೆಯಬೇಕಿದೆ ಎಂದರು.

ಮುಸ್ಲೀಮರು ನಿಮ್ಮ ನಾಗೇನಹಳ್ಳಿ ದರ್ಗಾವನ್ನು ಅಭಿವೃದ್ಧಿಗೊಳಿಸಿ. ದತ್ತಪೀಠದಲ್ಲಿನ ಅನಗತ್ಯ ಗೋರಿ ಸ್ಥಳಾಂತರ ಮಾಡಿ ಎಂದು ಸೂಚಿಸಿದ್ದೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...