alex Certify BIG NEWS: ದಳಪತಿಗಳಿಗೆ ಮತ್ತೊಂದು ಶಾಕ್; ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ ಶಾಸಕ ಶ್ರೀನಿವಾಸಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಳಪತಿಗಳಿಗೆ ಮತ್ತೊಂದು ಶಾಕ್; ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ ಶಾಸಕ ಶ್ರೀನಿವಾಸಗೌಡ

ಕೋಲಾರ: ಜೆಡಿಎಸ್ ನಾಯಕರಿಗೆ ಪಕ್ಷದ ಶಾಸಕರು ಶಾಕ್ ಮೇಲೆ ಶಾಕ್ ನೀಡುತ್ತಿದ್ದು, ಜಿ.ಟಿ.ದೆವೇಗೌಡರ ಬಳಿಕ ಇದೀಗ ಮತ್ತೋರ್ವ ಶಾಸಕ ಶ್ರೀನಿವಾಸಗೌಡ ಜೆಡಿಎಸ್ ಗೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.

ಶಾಸಕ ಕೋನರೆಡ್ಡಿ ಕೂಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೆರ್ಪಡೆ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಸುದ್ದಿ ಹರಡಿರುವ ಬೆನ್ನಲ್ಲೇ ಇದೀಗ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ನಾನು ಜೆಡಿಎಸ್ ಗೆ ರಾಜೀನಾಮೆ ನೀಡಿದ್ದೇನೆ ಮುಂದೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದ್ದಾರೆ.

ʼಕ್ರೈಂ ಪ್ಯಾಟ್ರೋಲ್ʼ​ ಕಾರ್ಯಕ್ರಮದ ಹಿಂದಿನ ಉದ್ದೇಶ ಬಿಚ್ಚಿಟ್ಟ ನಿರೂಪಕಿ

ಜೆಡಿಎಸ್ ನಿಂದ ನನ್ನನ್ನು ಉಚ್ಛಾಟನೆ ಮಾಡುವಂತೆ ರಾಜ್ಯಾಧ್ಯಕ್ಷರಿಗೆ ದೇವೇಗೌಡರು ಹೆಳಿದ್ದಾರೆ. ಇದನ್ನು ಗಮನಸಿ ನಾನಾಗಿಯೇ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಕೋಲಾರಕ್ಕೆ ಕೆ.ಸಿ.ವ್ಯಾಲಿ ನೀರು ಬರಲು ರಮೇಶ್ ಕುಮಾರ್ ಹಾಗೂ ಕೃಷ್ಣಭೈರೇಗೌಡ ಕಾರಣರು. ಈ ವಿಚಾರವಾಗಿ ನಾನು ಅವರಿಗೆ ಆದ್ಯತೆ ನೀಡಿದ್ದೆ. ಇದನ್ನೇ ದೊಡ್ಡ ವಿಚಾರ ಮಾಡಿದರು. ಕೆ.ಸಿ.ವ್ಯಾಲಿ ನೀರು ಕೊಚ್ಚೆ ನೀರು ಎಂದಿದ್ದಕ್ಕೆ ನಾನು ಪ್ರತಿಕ್ರಿಯಿಸಬೇಕಾಯ್ತು. ನನ್ನ ಮನಸ್ಸಿಗೂ ಬಹಳಷ್ಟು ನೋವಾಗಿದೆ. ಕೆಲ ಕಹಿ ಘಟನೆಗಳಿಂದ ನೊಂದು ಜೆಡಿಎಸ್ ಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದರು.

ನಾನು ಈ ಹಿಂದೆ ಕಾಂಗ್ರೆಸ್ ನಲ್ಲಿದ್ದವನು, ಮಂತ್ರಿಯಾದವನು. ಮುಂದೆ ಕೂಡ ಕಾಂಗ್ರೆಸ್ ಸೇರುವ ಬಗ್ಗೆ ತೀರ್ಮಾನಿಸಿದ್ದೇನೆ. ಈಗಗಾಲೇ ಡಿ.ಕೆ.ಶಿವಕುಮಾರ್ ಜೊತೆ ಮಾತುಕತೆ ನಡೆಸಿದ್ದೇನೆ. ಆದರೆ ಈವರೆಗೂ ದೇವೇಗೌಡರ ಜೊತೆ ಮಾತನಾಡಿಲ್ಲ. ಆದರೆ ಪಕ್ಷ ಬಿಡಲು ನಿರ್ಧರಿಸಿರುವುದು ಸತ್ಯ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...