alex Certify BIG NEWS: ದೆಹಲಿ ಪ್ರಯಾಣ ದಿಢೀರ್ ರದ್ದು; ಕುತೂಹಲ ಮೂಡಿಸಿದ ಪ್ರಹ್ಲಾದ್ ಜೋಶಿ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೆಹಲಿ ಪ್ರಯಾಣ ದಿಢೀರ್ ರದ್ದು; ಕುತೂಹಲ ಮೂಡಿಸಿದ ಪ್ರಹ್ಲಾದ್ ಜೋಶಿ ನಡೆ

ಬೆಂಗಳೂರು: ರಾಜ್ಯ ರಾಜಕೀಯ ಚಟುವಟಿಕೆಗಳು ಕ್ಷಣ ಕ್ಷಣಕ್ಕೂ ಗರಿಗೆದರುತ್ತಿದ್ದು, ಸಿಎಂ ಬದಲಾವಣೆ ಸುದ್ದಿ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದೆಹಲಿ ಪ್ರವಾಸ ರದ್ದುಗೊಳಿಸಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿರುವುದು ಕುತೂಹಲ ಇಮ್ಮಡಿಗೊಳಿಸಿದೆ.

ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಜೆ ವೇಳೆಗೆ ಹೈಕಮಾಂಡ್ ಸಂದೇಶ ಬರಲಿದೆ ಎಂಬ ಹೇಳಿಕೆ ನೀಡಿದ್ದರು. ಈ ನಡುವೆ ಹುಬ್ಬಳ್ಳಿಯಿಂದ ದೆಹಲಿಗೆ ಹೊರಟಿದ್ದ ಸಚಿವ ಪ್ರಹ್ಲಾದ್ ಜೋಶಿ, ದಿಡೀರ್ ಪ್ರಯಾಣ ರದ್ದುಗೊಳಿಸಿ ಬೆಗಳೂರಿಗೆ ಆಗಮಿಸಿರುವುದು ರಾಜಕೀಯ ವಲಯದಲ್ಲಿ ಕೌತುಕ ಮನೆ ಮಾಡಿದೆ.

SHOCKING NEWS: ಹಳಿ ದಾಟುತ್ತಿದ್ದಾಗ ಘೋರ ದುರಂತ; ರೈಲಿಗೆ ಸಿಲುಕಿ ಇಬ್ಬರ ದುರ್ಮರಣ

ಸಿಎಂ ರೇಸ್ ನಲ್ಲಿ ಪ್ರಹ್ಲಾದ್ ಜೋಶಿ ಹೆಸರು ಪ್ರಮುಖವಾಗಿ ಕೇಳಿಬರುತ್ತಿದ್ದು, ನಿನ್ನೆ ಕೂಡ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ಚರ್ಚೆ ನಡೆಸಿದ್ದು ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಜೋಶಿ ದಿಢೀರ್ ಆಗಿ ಬೆಂಗಳೂರಿಗೆ ಆಗಮಿಸಿರುವುದು ಇನ್ನಷ್ಟು ಅಚ್ಚರಿಗೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...