alex Certify BIG NEWS: ದೇವಸ್ಥಾನದಲ್ಲಿ ಕಳ್ಳತನ ಮಾಡಿ ಗ್ರಾಮಸ್ಥರಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತ; ಸಿಕ್ಕಿ ಬಿದ್ದ ಕಳ್ಳರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇವಸ್ಥಾನದಲ್ಲಿ ಕಳ್ಳತನ ಮಾಡಿ ಗ್ರಾಮಸ್ಥರಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತ; ಸಿಕ್ಕಿ ಬಿದ್ದ ಕಳ್ಳರು

ಕಾರವಾರ: ದೇವಸ್ಥಾನದ ಕಳ್ಳತನ ಮಾಡಿದ್ದ ಕಳ್ಳರನ್ನು ಹಿಡಿಯಲು ಸಾರ್ವಜನಿಕರು ಅಟ್ಟಿಸಿಕೊಂಡು ಬರುತ್ತಿದ್ದಂತೆ ತಪ್ಪಿಸಿಕೊಳ್ಳಲು ಮುಂದಾದಾಗ ಬೈಕ್ ಅಪಘಾತಕ್ಕೀಡಾಗಿ ಸಿಕ್ಕಿ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ನಡೆದಿದೆ.

ಮುಟ್ಟಳ್ಳಿ ಗ್ರಾಮ ಪಂಚಾಯ್ತಿಯ ಎಕ್ಕೆಗೋಲಿ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಗಿಲು ಮುರಿದು 55 ಸಾವಿರ ನಗದು, ದೇವರ ಪರಿಕರಗಳನ್ನು ಕಳ್ಳರು ಕದ್ದಿದ್ದರು. ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ತರು ಕಳ್ಳರನ್ನು ಅಟ್ಟಿಸಿಕೊಂಡು ಬಂದಿದ್ದಾರೆ. ಜನರಿಂದ ತಪ್ಪಿಸಿಕೊಳ್ಳಲು ಕಳ್ಳರು ಬೈಕ್ ಹತ್ತಿ ಪರಾರಿಯಾಗಲು ಮುಂದಾಗಿದ್ದಾರೆ. ಆದರೆ ನಿಯಂತ್ರಣ ತಪ್ಪಿದ ಬೈಕ್ ಅಪಘಾತವಾಗಿದೆ. ಕಳ್ಳರು ಸಿಕ್ಕಿಬಿದ್ದಿದ್ದು, ಗ್ರಾಮಸ್ಥರು ಕಳ್ಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಂಧಿತರನ್ನು ಶಿಅಮೊಗ್ಗ ಮೂಲದ ಇರ್ಫಾನ್ ಹಾಗೂ ಆರೀಫ್ ಎಂದು ಗುರುತಿಸಲಾಗಿದೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...